ಕೊಳ್ಳೇಗಾಲ: ಈರುಳ್ಳಿ ಬೆಳೆಗೆ ಖಾಸಗಿ ಕಂಪೆನಿಯ ಔಷಧ ಸಿಂಪಡಿಸಿ ಬೆಳೆ ರೈತರಿಗೆ ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಖಾಸಗಿ ಕಂಪೆನಿಗೆ ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆ ೨.೧೧ ಲಕ್ಷ ರೂ. ದಂಡ ವಿಧಿಸಿದೆ.
ಚಾ.ನಗರ ತಾಲ್ಲೂಕು ಯಮಗುಂಬ ಗ್ರಾಮದ ವೈ.ಕೆ.ಮಂಜುನಾಥ್, ನಾಗಮ್ಮ, ಭ್ರವಾರಂಭ ಅವರು ೨.೭.೨೦೨೧ರಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆಗೆ ಅಡಷಾಪ್ ಪ್ರಮೋಷನ್ ರಾಜ್ ಕೋಟ್ ಕಂಪನಿ ತಯಾರಿಸಿದ್ದ ಆಯುರ್ವೇದ ಔಷಧಿಯನ್ನು ಹೆಚ್ಚು ಇಳುವರಿ ಬರಲಿ ಎಂಬ ಉದ್ದೇಶದಿಂದ ಸಿಂಪಡಿಸಿದ್ದರು. ಆದರೆ ಔಷಧಿ ಸಿಂಪಡಿಸಿದ್ದ ಕೆಲವೇ ತಿಂಗಳಲ್ಲಿ ಬೆಳೆ ಸಂಪೂರ್ಣ ಒಣಗಿ ಹೋಗಿತ್ತು. ಇದ್ದರಿಂದ ಒಟ್ಟು ೨ ಲಕ್ಷ ರೂ. ನಷ್ಟವಾಗಿದ್ದು, ಪರಿಹಾರ ಕೊಡಿಸಬೇಕೆಂದು ಚಾ.ನಗರ ಜಿಲ್ಲಾ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಿದ್ದರು.
ಈ ಬಗ್ಗೆ ವೇದಿಕೆಯ ಪೀಠಾಧ್ಯಕ್ಷರಾದ ನ್ಯಾಯಾಧೀಶರಾದ ನವೀನ್ ಕುವಾರಿ, ಪೀಠ ಸದಸ್ಯರಾದ ಶ್ರೀನಿಧಿ, ಭಾರತಿ ಅವರು ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ನಷ್ಟಕ್ಕೆ ಒಳಗಾದ ರೈತರಿಗೆ ೨.೧೧ ಲಕ್ಷ ರೂ. ಪರಿಹಾರ ನೀಡುವಂತೆ ನ.೩ರಂದು ಆದೇಶ ನೀಡಿದ್ದಾರೆ. ಒಂದು ತಿಂಗಳ ಒಳಗೆ ಪರಿಹಾರ ನೀಡದಿದ್ದರೆ ಶೇ.೧೮ ರಷ್ಟು ಬಡ್ಡಿ ಸೇರಿಸಿ ಕೊಡುವಂತೆ ಸೂಚಿಸಿದ್ದಾರೆ.
ರೈತರ ಪರ ಹಿರಿಯ ವಕೀಲ ತೀರ್ಥಪ್ರಸಾದ್ ವಾದ ಮಂಡಿಸಿದರು. ಔಷಧಿ ಕಂಪನಿ ಪರ ವಕೀಲ ವೀರಭದ್ರಸ್ವಾಮಿ ವಕಾಲತ್ತು ವಹಿಸಿದ್ದರು.
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…