ಕೊಳ್ಳೇಗಾಲ: ಪಟ್ಟಣದ ಲಿಂಗಣಾಪುರ ಬಡಾವಣೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ೫೧ ಅರ್ಜಿಗಳನ್ನು ಸ್ವೀಕರಿಸಲಾಯಿತು.
ಈ ೫೧ ಅರ್ಜಿಗಳ ಪೈಕಿ ಹೆಚ್ಚು ಖಾತೆ ಬದಲಾವಣೆಗೆ ಸಂಬಂಧಿಸಿದ್ದವುಗಳಾಗಿದ್ದವು. ಕೆಲವರು ೫ ವರ್ಷಗಳ ಕಾಲಕ್ಕೂ ಹೆಚ್ಚು ಸಮಯವಾದರೂ ನಮಗೆ ಖಾತೆ ಮಾಡಿಕೊಟ್ಟಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು.
ಅರ್ಜಿ ಸ್ವೀಕರಿಸಿದ ತಹಸಿಲ್ದಾರ್ ಮಂಜುಳರವರು ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಕೈಗೊಳ್ಳುವುದಾಗಿ ತಿಳಿಸಿದರು.
ತಾ.ಪಂ. ಇಒ ಮಹೇಶ್, ನಗರಸಭೆ ಪೌರಾಯುಕ್ತ ನಂಜುಂಡಸ್ವಾಮಿ, ಅಧ್ಯಕ್ಷೆ ರೇಖಾ, ಉಪಾಧ್ಯಕ್ಷೆ ಸುಶೀಲಾ, ಸದಸ್ಯ ರಾಮಕೃಷ್ಣ, ಜಯರಾಜು, ಪ್ರಶಾಂತ್, ಸಿದ್ದಯ್ಯನಪುರ ಗ್ರಾ.ಪಂ. ಅಧ್ಯಕ್ಷ ಗುಣಶೇಖರ್, ಬಿಇಒ ಚಂದ್ರಪಾಟೀಲ್, ಗ್ರೇಡ್-೨ ತಹಸಿಲ್ದಾರ್ ಶಿವಕುಮಾರ್, ನಾಡಗೌಡ ಅನಿಲ್, ಶಿವಪ್ಪ ಇತರರು ಹಾಜರಿದ್ದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…