ಜಿಲ್ಲೆಗಳು

ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭ : ಸಿಎಂ ಬೊಮ್ಮಾಯಿ

ಕೊಳ್ಳೇಗಾಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆಗೊಂಡ ಬಳಿಕ ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದರು.

ಪಟ್ಟಣದ ಎಸ್.ವಿ.ಕೆ ಕಾಲೇಜು ಸಮೀಪದ ಹೆದ್ದಾರಿಯ ರಸ್ತೆಯ ವೃತ್ತದಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ  ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಳೆಯ ನಡುವೆಯೂ ಸಹಾ ಮಾಲಾರ್ಪಣೆ ಮಾಡಿ ಬಳಿಕ ಕೊಳ್ಳೇಗಾಲದ ಜನರ ಉದ್ದೇಶಿಸಿ ಮಾತನಾಡಿದರು.

ಗುತ್ತಿಗೆದಾರ ಓಲೆ ಮಹದೇವ ಸ್ವಂತ ಖರ್ಚಿನಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಿರುವುದು ಇತಿಹಾಸ ಸೇರಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡುವುದಕ್ಕೆ ಓಲೆ ಮಹದೇವು ಪುಣ್ಯ ಮಾಡಿದ್ದರು ಎಂದು ತಿಳಿಸಿದರು.

ಇಂದು ಅಂಬೇಡ್ಕರ್ ನೀಡಿದ ಸಂವಿಧಾನ ಮಾರ್ಗ ದರ್ಶನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ಸೇವೆ ಮಾಡುತ್ತಿದೆ. ಅವರಿಂದಾಗಿ ಮಾತ್ರ ಇಂದು ನಾವೆಲ್ಲ ಜನಪ್ರತಿನಿಧಿಗಳಾಗಿ ನಿಮ್ಮ ಸೇವೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಎಲ್ಲರೂ ಅಂಬೇಡ್ಕರ್ ಅವರ ಆಶಯ ಹಾಗೂ ಆದರ್ಶ ಗಳನ್ನು ಅಳವಡಿಸಿಕೊಂಡು ಜೀವನ ನಡೆಸೋಣ. ಬಿಜೆಪಿ ಸರ್ಕಾರ ಹಲವಾರು ಯೋಜನೆಗಳ ಮೂಲಕ ಅಂಬೇಡ್ಕರ್ ಅವರ ಚಿಂತನೆಗಳಲ್ಲಿ ದೇಶ ನಡೆಸುತ್ತಿದ ಎಂದರು.

ಈ ವೇಳೆ ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಅವರನ್ನು ಸನ್ಮಾನಿಸಿ ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.

ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಎನ್.ಮಹೇಶ್, ನಿರಂಜನ್ ಕುಮಾರ್, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ದತ್ತೇಶ್ ಕುಮಾರ್, ಪ್ರತಿಮೆ ನಿರ್ಮಾತೃ ಓಲೆ ಮಹಾದೇವ ಇತರರು ಇದ್ದರು.

andolanait

Recent Posts

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

31 mins ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

32 mins ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

51 mins ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

1 hour ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

2 hours ago

ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

2 hours ago