ಕೊಳ್ಳೇಗಾಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆಗೊಂಡ ಬಳಿಕ ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದರು.
ಪಟ್ಟಣದ ಎಸ್.ವಿ.ಕೆ ಕಾಲೇಜು ಸಮೀಪದ ಹೆದ್ದಾರಿಯ ರಸ್ತೆಯ ವೃತ್ತದಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಳೆಯ ನಡುವೆಯೂ ಸಹಾ ಮಾಲಾರ್ಪಣೆ ಮಾಡಿ ಬಳಿಕ ಕೊಳ್ಳೇಗಾಲದ ಜನರ ಉದ್ದೇಶಿಸಿ ಮಾತನಾಡಿದರು.
ಗುತ್ತಿಗೆದಾರ ಓಲೆ ಮಹದೇವ ಸ್ವಂತ ಖರ್ಚಿನಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಿರುವುದು ಇತಿಹಾಸ ಸೇರಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡುವುದಕ್ಕೆ ಓಲೆ ಮಹದೇವು ಪುಣ್ಯ ಮಾಡಿದ್ದರು ಎಂದು ತಿಳಿಸಿದರು.
ಇಂದು ಅಂಬೇಡ್ಕರ್ ನೀಡಿದ ಸಂವಿಧಾನ ಮಾರ್ಗ ದರ್ಶನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ಸೇವೆ ಮಾಡುತ್ತಿದೆ. ಅವರಿಂದಾಗಿ ಮಾತ್ರ ಇಂದು ನಾವೆಲ್ಲ ಜನಪ್ರತಿನಿಧಿಗಳಾಗಿ ನಿಮ್ಮ ಸೇವೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಎಲ್ಲರೂ ಅಂಬೇಡ್ಕರ್ ಅವರ ಆಶಯ ಹಾಗೂ ಆದರ್ಶ ಗಳನ್ನು ಅಳವಡಿಸಿಕೊಂಡು ಜೀವನ ನಡೆಸೋಣ. ಬಿಜೆಪಿ ಸರ್ಕಾರ ಹಲವಾರು ಯೋಜನೆಗಳ ಮೂಲಕ ಅಂಬೇಡ್ಕರ್ ಅವರ ಚಿಂತನೆಗಳಲ್ಲಿ ದೇಶ ನಡೆಸುತ್ತಿದ ಎಂದರು.
ಈ ವೇಳೆ ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಅವರನ್ನು ಸನ್ಮಾನಿಸಿ ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.
ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಎನ್.ಮಹೇಶ್, ನಿರಂಜನ್ ಕುಮಾರ್, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ದತ್ತೇಶ್ ಕುಮಾರ್, ಪ್ರತಿಮೆ ನಿರ್ಮಾತೃ ಓಲೆ ಮಹಾದೇವ ಇತರರು ಇದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…