ಜಿಲ್ಲೆಗಳು

ಗುಂಡಾಲ್ ಜಲಾಶಯ ಪ್ರದೇಶದಲ್ಲಿ ಕಾಡಾನೆಗಳ ಕಾಟ

ಕಾಮಗೆರೆ (ಕೊಳ್ಳೇಗಾಲ ತಾಲ್ಲೂಕು): ಗುಂಡಾಲ್ ಜಲಾಶಯಕ್ಕೆ ಸೇರಿದ ಪ್ರದೇಶದಲ್ಲಿ ಎರಡು ಕಾಡಾನೆಗಳು ನುಗ್ಗಿ ಜನರಲ್ಲಿ ಆತಂಕ ಸೃಷ್ಟಿಸಿವೆ.

ಸಂಗ್ರಹ ಚಿತ್ರ

ಒಂದು ಗಂಡು ಹಾಗೂ ಒಂದು ಹೆಣ್ಣು ಆನೆ ಎರಡು ದಿನದಿಂದ ಈ ಭಾಗದಲ್ಲಿ ಬೀಡು ಬಿಟ್ಟು ಹಲವಾರು ಜಮೀನುಗಳಲ್ಲಿ ಬೆಳೆ ನಾಶ ಮಾಡಿವೆ. ಕಣ್ಣೂರು ಗ್ರಾಮದಲ್ಲಿ ಮೊದಲು ಕಾಣಿಸಿಕೊಂಡ ಆನೆಗಳು ಆನಂತರ 4 ಮತ್ತೀಪುರ ಮಹದೇವಪ್ಪ ಅವರ ಜಮೀನಿಗೆ ನುಗ್ಗಿ ಮೆಕ್ಕೆ ಜೋಳ ಬೆಳೆ ನಾಶ ಮಾಡಿವೆ. ಮರಳು ಸೋಗೆ ಬಳಿಯೂ ಆನೆಗಳು ಇದ್ದುದನ್ನು ಜನ ನೋಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು. ಆಹಾರ ಹುಡುಕಿ ಬಂದಿರುವ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನಿಸುತ್ತಿದ್ದಾರೆ.

ಈ ಕುರಿತು ಆಂದೋಲನದ ಜತೆ ಮಾತನಾಡಿದ ಮಲೈಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಡಾ.ಸಂತೋಷ್‌ಕುಮಾರ್, ನಿನ್ನೆಯೇ ಒಂದು ಆನೆ ಇರುವ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದೇವೆ. ಈ ಪ್ರದೇಶದ ಕೆಲ ಭಾಗ ಬಿಆರ್‌ಟಿಗೆ ಬರಲಿದೆ. ನಮ್ಮ ಭಾಗದಲ್ಲಿ ಬುಧವಾರ ಆನೆಗಳನ್ನು ಕಾಡಿಗೆ ಅಟ್ಟುತ್ತೇವೆ ಎಂದು ತಿಳಿಸಿದರು.

andolanait

Recent Posts

ಮಾಲ್ದಾರೆ : ರಸ್ತೆ ಕಾಮಗಾರಿ ಬಳಿಕ ಸಿಮೆಂಟ್ ಚೀಲಗಳ ತ್ಯಾಜ್ಯ ; ಪಂಚಾಯಿತಿ ವಾಹನ ದುರುಪಯೋಗ ಆರೋಪ

ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…

41 mins ago

ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ

ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…

51 mins ago

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

3 hours ago

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…

3 hours ago

ಓದುಗರ ಪತ್ರ | ನಿ. . . ದರ್ಶನ !

ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…

3 hours ago

ಓದುಗರ ಪತ್ರ | ಮಕ್ಕಳ ಸುರಕ್ಷತೆಯ ಬಗ್ಗೆ ಗಮನ ಹರಿಸಿ

ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…

3 hours ago