ಜಿಲ್ಲೆಗಳು

ಗುಂಡಾಲ್ ಜಲಾಶಯ ಪ್ರದೇಶದಲ್ಲಿ ಕಾಡಾನೆಗಳ ಕಾಟ

ಕಾಮಗೆರೆ (ಕೊಳ್ಳೇಗಾಲ ತಾಲ್ಲೂಕು): ಗುಂಡಾಲ್ ಜಲಾಶಯಕ್ಕೆ ಸೇರಿದ ಪ್ರದೇಶದಲ್ಲಿ ಎರಡು ಕಾಡಾನೆಗಳು ನುಗ್ಗಿ ಜನರಲ್ಲಿ ಆತಂಕ ಸೃಷ್ಟಿಸಿವೆ.

ಸಂಗ್ರಹ ಚಿತ್ರ

ಒಂದು ಗಂಡು ಹಾಗೂ ಒಂದು ಹೆಣ್ಣು ಆನೆ ಎರಡು ದಿನದಿಂದ ಈ ಭಾಗದಲ್ಲಿ ಬೀಡು ಬಿಟ್ಟು ಹಲವಾರು ಜಮೀನುಗಳಲ್ಲಿ ಬೆಳೆ ನಾಶ ಮಾಡಿವೆ. ಕಣ್ಣೂರು ಗ್ರಾಮದಲ್ಲಿ ಮೊದಲು ಕಾಣಿಸಿಕೊಂಡ ಆನೆಗಳು ಆನಂತರ 4 ಮತ್ತೀಪುರ ಮಹದೇವಪ್ಪ ಅವರ ಜಮೀನಿಗೆ ನುಗ್ಗಿ ಮೆಕ್ಕೆ ಜೋಳ ಬೆಳೆ ನಾಶ ಮಾಡಿವೆ. ಮರಳು ಸೋಗೆ ಬಳಿಯೂ ಆನೆಗಳು ಇದ್ದುದನ್ನು ಜನ ನೋಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು. ಆಹಾರ ಹುಡುಕಿ ಬಂದಿರುವ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನಿಸುತ್ತಿದ್ದಾರೆ.

ಈ ಕುರಿತು ಆಂದೋಲನದ ಜತೆ ಮಾತನಾಡಿದ ಮಲೈಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಡಾ.ಸಂತೋಷ್‌ಕುಮಾರ್, ನಿನ್ನೆಯೇ ಒಂದು ಆನೆ ಇರುವ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದೇವೆ. ಈ ಪ್ರದೇಶದ ಕೆಲ ಭಾಗ ಬಿಆರ್‌ಟಿಗೆ ಬರಲಿದೆ. ನಮ್ಮ ಭಾಗದಲ್ಲಿ ಬುಧವಾರ ಆನೆಗಳನ್ನು ಕಾಡಿಗೆ ಅಟ್ಟುತ್ತೇವೆ ಎಂದು ತಿಳಿಸಿದರು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

7 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

8 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

10 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

10 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

10 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

17 hours ago