ಜಿಲ್ಲೆಗಳು

ನಗರ ಸಭಾ ಉಪ ಚುನಾವಣೆಯಲ್ಲಿ ವಿ.ಸೋಮಣ್ಣ ನಾಯಕತ್ವಕ್ಕೆ ಜೈ ಹೋ ಎಂದ ಮತದಾರ

ಕೊಳ್ಳೇಗಾಲ : ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆ ಯಲ್ಲಿ ಮತದಾರರ ಬಿಜೆಪಿ ಪರ ಒಲವು ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ವಿಸೋಮಣ್ಣರವರ ನಾಯಕತ್ವಕ್ಕೆ ಜೈ ಎಂದಿದ್ದಾರೆ.

ಉಪಚುನಾವಣೆ ಮಾಸ್ಟರ್ ಮೈಂಡ್ ಎಂದೇ ಪ್ರಸಿದ್ಧಿ ಪಡೆದಿರುವ ಸಚಿವ ವಿ ಸೋಮಣ್ಣ ರವರ ಎಲ್ಲಚುನಾವಣಾ ತಂತ್ರಗಳು ನಗರಸಭೆ ಉಪಚುನಾವಣೆ ಯಶಸ್ಸು ಕಂಡಿದೆ.

ಬಿಎಸ್ಪಿ ಪಕ್ಷದಿಂದ ಚುನಾಯಿತರಾಗಿ ಆಯ್ಕೆಯಾಗಿದ್ದ ಸದಸ್ಯರುಗಳು ನಗರಸಭೆಗೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಬಿಎಸ್ ಪಿ ಪಕ್ಷದಿಂದ ಸ್ಪರ್ಧಿಸಿದ್ದ ಜಯಮೇರಿ ಅವರನ್ನು ಬೆಂಬಲಿಸಲಿಲ್ಲ ಎಂದು ಜಿಲ್ಲಾಧಿಕಾರಿಗಳ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆ ಜಿಲ್ಲಾಧಿಕಾರಿಗಳ ಕೋರ್ಟ್ ನಲ್ಲಿ 7 ಬಿಎಸ್ಪಿ ಸದಸ್ಯರನ್ನು ಅನರ್ಹಗೊಳಿಸಲಾಗಿತ್ತು. ಅನರ್ಹ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು ಸಹ ಜಿಲ್ಲಾಧಿಕಾರಿಗಳ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದರಿಂದ ಇವರ ಸದಸ್ಯತ್ವ ವಜಾಗೊಂಡಿತ್ತು. ಸದಸ್ಯತ್ವ ವಜಾಗೊಂಡ ಹಿನ್ನೆಲೆ ನಡೆದ ಕೊಳ್ಳೇಗಾಲ ನಗರಸಭೆ ಉಪಚುನಾವಣೆ 7ಸ್ಥಾನಗಳಿಗೆ ಶಾಸಕ ಎನ್ ಮಹೇಶ್ ಬೆಂಬಲಿತ ಸದಸ್ಯರುಗಳಿಗೆ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಇವರೆಲ್ಲರನ್ನು ಗೆಲ್ಲಿಸಿಕೊಂಡು ಬರಲು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ನವರ ಮಾರ್ಗದರ್ಶನದಲ್ಲಿ ಶಾಸಕ ಎನ್ ಮಹೇಶ್ ಹಾಗೂ ಮಾಜಿ ಶಾಸಕ ನಂಜುಂಡಸ್ವಾಮಿ ಒಗ್ಗಟ್ಟು ಪ್ರದರ್ಶಿಸಿ ಸಂಘಟನೆಗೆ ಒತ್ತು ನೀಡಿದ್ದರಿಂದ ಉಪಚುನಾವಣೆ ಯಲ್ಲಿ 6 ಬಿಜೆಪಿ ಸದಸ್ಯರು ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಗೆ ಮುಖಭಂಗ : ನಗರಸಭೆ 7ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಒಬ್ಬ ಅಭ್ಯರ್ಥಿ ಜಯ ಗಳಿಸಿ ಉಳಿದ 6 ಅಭ್ಯರ್ಥಿಗಳು ಪರಾಭವಗೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಸೇರಿದಂತೆ ಮೂವರು ಮಾಜಿ ಶಾಸಕರುಗಳಿಗೆ ಈ ಉಪಚುನಾವಣೆಯಲ್ಲಿ ಮುಖಭಂಗವಾಗಿದೆ.

ಬಣ ರಾಜಕೀಯ ಶಮನ : ಬಣ ರಾಜಕಾರಣದಿಂದಾಗಿ ಹಲವು ಗುಂಪುಗಳಾಗಿದ್ದ ಎಲ್ಲಾ ಬಣಗಳನ್ನು ಮಧುವನಹಳ್ಳಿ ರೆಸಾರ್ಟ ನಲ್ಲಿ ಒಂದುಗೂಡಿಸಿ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಸೂಚನೆ ನೀಡಿದ್ದು ಬಿಜೆಪಿ ಗೆಲುವಿಗೆ ವರದಾನವಾಗಿದೆ .

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

18 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

18 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

18 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

18 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

19 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

19 hours ago