ಜಿಲ್ಲೆಗಳು

ಪ್ರೊ.ಎಚ್ಚೆಲ್ಕೆ ವೈಚಾರಿಕ ಪ್ರಶಸ್ತಿ ಸ್ವೀಕರಿಸಿ ಕೋಟಗಾನಹಳ್ಳಿ ರಾಮಯ್ಯ ನುಡಿ

ಮಂಡ್ಯ: ನಮ್ಮ ನೆಲದ ಬಹಳ ದೊಡ್ಡ ಬಿಕ್ಕಟ್ಟು ಶಿಕ್ಷಣ. ೧೫೦ ವರ್ಷಗಳಿಂದ ಅತ್ಯಂತ ದೋಷಪೂರ್ಣ ಸ್ಥಿತಿಯಲ್ಲಿ ಶಿಕ್ಷಣ ವ್ಯವಸ್ಥೆ ಇದೆ. ಈ ವ್ಯವಸ್ಥೆಯನ್ನೇ ಮುಂದಿನ ತಲೆಮಾರಿಗೂ ಮುಂದುವರಿಸಿದರೆ ಭವಿಷ್ಯ ಅಪಾಯಕಾರಿಯಾಗುತ್ತದೆ ಎಂದು ಕವಿ, ನಾಟಕಕಾರ ಕೋಟಗಾನಹಳ್ಳಿ ರಾಮಯ್ಯ ಎಚ್ಚರಿಸಿದರು.

ಪ್ರೊ.ಎಚ್.ಎಲ್.ಕೇಶವಮೂರ್ತಿ ಪ್ರತಿಷ್ಠಾನದಿಂದ ಬುಧವಾರ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ನಡೆದ ೫ನೇ ವರ್ಷದ ಪ್ರೊ.ಎಚ್ಚೆಲ್ಕೆ ವೈಚಾರಿಕ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ನಮ್ಮ ಮಕ್ಕಳು ಏನು ಕಲಿಯುತ್ತಿದ್ದಾರೆ ಗೊತ್ತಿಲ್ಲ. ಈ ಕಲಿಕೆಗೆ ಭವಿಷ್ಯ ಇದೆಯೇ? ಅದು ಗೊತ್ತಿಲ್ಲ. ಎಷ್ಟೋ ಪೋಷಕರಿಗೆ ತಮ್ಮ ಮಕ್ಕಳ ಎಷ್ಟನೇ ತರಗತಿಯಲ್ಲಿ ಓದುತ್ತಿದ್ದಾರೆ. ಯಾವ ಶಾಲೆ? ಅದೂ ತಿಳಿದಿಲ್ಲ. ಇದು ನಮ್ಮ ಸ್ಥಿತಿ ಎಂದರು.

ಮಕ್ಕಳು ಏನು ಓದಬೇಕೆಂದು ಯಾರು ನಿರ್ಧರಿಸುತ್ತಿದ್ದಾರೆ? ಸಮಾಜ, ಪೋಷಕರು, ಮಕ್ಕಳು ಅಲ್ಲ. ಶಿಕ್ಷಣ ತಜ್ಞರು ನಿರ್ಧರಿಸುತ್ತಿದ್ದಾರೆ. ಕಾನ್ವೆಂಟ್‌ನಲ್ಲಿ ಕಲಿಯುವ ಮಗು ರಾಗಿ ಮರದಲ್ಲಿ ಬೆಳೆಯುತ್ತದೆ ಎನ್ನುತ್ತದೆ. ಪ್ರಾಥಮಿಕ ಶಾಲೆಯ ಮಗುವೊಂದು ರಾಕೆಟ್ ತಂತ್ರಜ್ಞಾನದ ಬಗ್ಗೆ ತಿಳಿಯಬಯಸಿತು. ಅದಕ್ಕೆ ಪೂರಕ ವ್ಯವಸ್ಥೆ ನಮ್ಮಲ್ಲಿ ಇಲ್ಲ ಎಂದರು.

ಮಕ್ಕಳ ಶಿಕ್ಷಣಕ್ಕೆ ಏನಾದರೂ ಪರಿಹಾರ ಹುಡುಕಬೇಕೆಂದು ಜೀವನದಿಯ ಜಾಡು ಹುಡುಕುತ್ತ ಸಾಗಿದೆ. ಇದಕ್ಕೆ ಕಿರುಝರಿಯ ಪಯಣಗಳನ್ನು ಕೂಡಿಸಿಕೊಂಡೆ. ನಮ್ಮ ಪೂರ್ವಿಕರ ವಿವೇಕ ಮತ್ತು ಜನಪದ ಕತೆಗಳನ್ನು ಆಧರಿಸಿ ನೆಲಪಠ್ಯ ರೂಪಿಸುತ್ತಿರುವೆ. ಜೀವಂತ ಪ್ರಬಂಧವಾಗಿ ೬ ತಿಂಗಳಲ್ಲಿ ಸಿಗಲಿದೆ ಎಂದು ತಿಳಿಸಿದರು.

ಮಕ್ಕಳ ಸಾಹಿತ್ಯಕ್ಕೆ ಕೊಡುಗೆ ನೀಡಿದ ಕುವೆಂಪು, ರಾಜರತ್ನಂ, ಕೈಲಾಸಂ ಪರಂಪರೆಯನ್ನು ಯಾರು ಕೂಡ ಗಮನಿಸಲು ಹೋಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಮಕ್ಕಳಿಗೆ ಏನು ಬರೆದಿದ್ದಾರೆ ಎಂದು ಕೇಳುತ್ತಾರೆ. ನಮ್ಮಲ್ಲಿ ಮಕ್ಕಳ ಸಾಹಿತ್ಯ ಕೊನೆಯದು. ಸಶಸ್ತ್ರ ಮಾರಾಟ ಮಾಡುವ ಸ್ವಿಡನ್ ದೇಶದಲ್ಲಿ ಪ್ರಧಾನಿ, ಅಧ್ಯಕ್ಷನಾಗುವುದು ಸುಲಭ. ಶಿಕ್ಷಕನಾಗುವುದು ಕಷ್ಟ. ಕಠಿಣವಾದ ಪರೀಕ್ಷೆಗಳ ಮೂಲಕ ಆಯ್ಕೆ ನಡೆಯುತ್ತದೆ. ನಮ್ಮಲ್ಲಿ ಯಾವ ಪರಿಸ್ಥಿತಿ ಇದೆ? ಮಕ್ಕಳಿಗೆ ಎಂತಹ ಭವಿಷ್ಯ ರೂಪಿಸುತ್ತಿದ್ದೇವೆ? ಎಂದರು.

ಇವತ್ತು ೧೯೯೧ರಲ್ಲಿ ಭಾರತ ಜಾಗತೀಕರಣಕ್ಕೆ ತೆರೆದುಕೊಂಡಿತು. ಇದರ ಪರಿಣಾಮ ಮುಂದಿನ ೧೫ ವರ್ಷಕ್ಕೆ ತೀವ್ರವಾಗುತ್ತದೆ. ಎನ್‌ಇಪಿ ಕೌಶಲದ ಮೂಲಕ ೧೫ ಸಾವಿರಕ್ಕೆ ನಮ್ಮ ಮಕ್ಕಳನ್ನು ಗುಲಾಮರನ್ನಾಗಿಸುತ್ತದೆ. ಇದು ಹಿಟ್ಲರ್‌ಗಿಂತ ಕ್ರೂರವಾದದ್ದು ಮತ್ತು ನರಹತ್ಯೆಗೆ ಕಾರಣವಾಗುತ್ತದೆ. ಎಲ್ಲ ರೀತಿಯ ಚೌಕಟ್ಟಿಗೆ ವಿಷದ ಬಳ್ಳಿ ಬಿತ್ತಲಾಗಿದೆ. ಅದನ್ನು ಹಬ್ಬಿಸುವುದು ಉಳಿದಿರುವ ಕೆಲಸ. ನಮ್ಮ ಮಕ್ಕಳ ಭವಿಷ್ಯಭೀಕರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರತಿರೋಧ ಏನು ಮಾಡಬೇಕು? ಆ ದಿಕ್ಕಿನಲ್ಲಿ ಸಂತೋಷವಾಗುವಷ್ಟು ಕೆಲಸ ಮಾಡಿದ್ದೇನೆ. ನಮ್ಮ ಮನೆಗಳಿಂದ ಪ್ರತಿರೋಧ ರೂಪಿಸಬೇಕು. ಇದಕ್ಕೆ ಪೂರ್ವಿಕರ ವಿವೇಕ ಬಳಸಿಕೊಳ್ಳಬೇಕು. ಮಕ್ಕಳ ಭವಿಷ್ಯ ರೂಪಿಸುವ ದಿಸೆಯಲ್ಲಿ ೨೦ ನಾಟಕಗಳನ್ನು ಬರೆದಿದ್ದೇನೆ. ಅದರಲ್ಲಿಯೂ ಬಹಳ ಆನಂದ ಇದೆ ಎಂದು ನುಡಿದರು.

ಪ್ರೊ.ಎಚ್.ಎಲ್.ಕೇಶವಮೂರ್ತಿ ಪ್ರತಿಷ್ಠಾನದ ಅಧ್ಯಕ್ಷ ಗುರುಪ್ರಸಾದ್ ಕೆರಗೋಡು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಉಪನ್ಯಾಸಕ ಎಚ್.ಎನ್.ಶಿವಣ್ಣಗೌಡ ಪ್ರಶಸ್ತಿ ಪುರಸ್ಕೃತರ ಕುರಿತು ಮಾತನಾಡಿದರು. ಹಿರಿಯ ಲೇಖಕ ಜಗದೀಶ್ ಕೊಪ್ಪ ಸ್ವಾಗತಿಸಿದರು. ಕವಿ ರಾಜೇಂದ್ರ ಪ್ರಸಾದ್ ನಿರೂಪಿಸಿದರು.


ಪ್ರೊ.ಎಚ್.ಎಲ್.ಕೇಶವಮೂರ್ತಿ ಅಕ್ಷರಗಳಲ್ಲಿ ನುಡಿಗಳಲ್ಲಿ ಸದಾ ಜೀವಂತವಾಗಿದ್ದಾರೆ. ಬೇಸರಗಹಳ್ಳಿ ರಾಮಣ್ಣ ಸೇರಿದಂತೆ ಅನೇಕರು ವ್ಯಕ್ತಿಯ ನೆನಪಾಗಿ ಉಳಿಯೋದಿಲ್ಲ. ಬಳಗದ ನೆನಪಾಗಿ ಉಳಿಯುತ್ತಾರೆ. ಈ ಪ್ರಶಸ್ತಿ ಹೃದಯ ಭಾರ ಅನಿಸಿತು. ನಾನೇನು ದೊಡ್ಡ ಕೆಲಸ ಮಾಡಿಲ್ಲ. ಹೆಚ್ಚೇ ಅಭಿಮಾನ ಪ್ರೀತಿ ತೋರಿದ್ದಾರೆ.

-ಕೋಟಗಾನಹಳ್ಳಿ ರಾಮಯ್ಯ


ಕೋಟಗಾನಹಳ್ಳಿ ರಾಮಯ್ಯ ಬಂಡೆಗಳ ನಡುವಿನ ಚಿಗುರು. ಸಿನಿಮಾ, ಸಂಸ್ಕೃತಿ, ಜನರಿಂದ ದೂರವಾಗಿ ಯೋಗಿಯಂತೆ ಆದಿಮದಲ್ಲಿ ಇದ್ದಾಗಲೂ ಜನರ ಬಗ್ಗೆಯೇ ಆಲೋಚಿಸುತ್ತಾರೆ. ಹಲವು ಸಂಕಷ್ಟಗಳನ್ನು ಎದುರಿಸುತ್ತ ಇನ್ನೊಂದು ಇನ್ನೊಂದು ಹೆಜ್ಜೆಗಳನ್ನು ಇಟ್ಟಿದ್ದಾರೆ. ಕನ್ನಡ ಜನ ಸಂಸ್ಕೃತಿ, ಚಳವಳಿಗಳು ಕೋಟಗಾನಹಳ್ಳಿ ರಾಮಯ್ಯ ಹೆಸರು ಉಲ್ಲೇಖಿಸದೇ ಮುಂದಕ್ಕೆ ಹೋಗಲಾಗದು.

-ಸಿ.ಎಂ.ನರಸಿಂಹಮೂರ್ತಿ, ಹಿರಿಯ ಪತ್ರಕರ್ತ

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

46 mins ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

1 hour ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

14 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

15 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

15 hours ago