ಚಾ.ನಗರ: ಸುದ್ದಿಗೋಷ್ಠಿಯಲ್ಲಿ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ.ಕೆನಡಿ ಹೇಳಿಕೆ
ಚಾಮರಾಜನಗರ: ರಾಜ್ಯದಲ್ಲಿರುವ ಕ್ರೈಸ್ತರ ಕಲ್ಯಾಣಕ್ಕೆಂದು ಬಿಜೆಪಿ ಸರ್ಕಾರವು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ೫೦ ಕೋಟಿ ರೂ. ನೀಡಿದ್ದು, ಇನ್ನು ೫೦ ಕೋಟಿ ರೂ. ಮಂಜೂರು ಮಾಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷರಾದ ಜೆ.ಕೆನಡಿ ಶಾಂತಕುವಾರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಾತನಾಡಿದ ಅವರು, ಈಗ ನೀಡಿರುವ ೫೦ ಕೋಟಿ ರೂ. ಅನುದಾನ ಅಭಿವೃದ್ಧಿಕಾರ್ಯಕ್ರಮಗಳಿಗೆ ಸಾಲುತ್ತಿಲ್ಲ. ಆದ್ದರಿಂದ ಮತ್ತಷ್ಟು ಅನುದಾನ ಕೋರಲಾಗಿದೆ ಎಂದರು.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ೨೦೧೧ ರಲ್ಲಿ ಸಮಿತಿಯನ್ನು ರಚಿಸಲಾಯಿತು. ನಾನು ಅಧ್ಯಕ್ಷನಾಗಿ ನೇಮಕಗೊಂಡು ೩ ತಿಂಗಳಾಗಿದ್ದು, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಸಮಿತಿಯು ಕೈಗೊಂಡಿರುವ ಕಲ್ಯಾಣ ಕಾರ್ಯಕ್ರಮಗಳನ್ನು ತಿಳಿಸಲು ಮತ್ತು ವಾಹಿತಿ ನೀಡಲು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ ಎಂದರು.
ಶಿವಮೊಗ್ಗ, ಬಳ್ಳಾರಿ ಸೇರಿದಂತೆ ೧೬ ಜಿಲ್ಲೆಗಳಲ್ಲಿ ಪ್ರವಾಸ ವಾಡಲಾಗಿದೆ. ಈ ಜಿಲ್ಲೆಯು ೧೭ನೇಯದು. ರಾಜ್ಯದ ಸುಮಾರು ೧೯೫ ಚರ್ಚ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಮಂಗಳವಾರ ಇದೇ ಜಿಲ್ಲೆಯ ೪ ಚರ್ಚ್ಗಳಿಗೆ ಭೇಟಿ ನೀಡಿ ವೀಕ್ಷಿಸಿದ್ದೇನೆ. ನಗರದ ಸಂತಪೌಲರ ಚರ್ಚ್ನಲ್ಲಿ ಸಮಿತಿಯ ಅನುದಾನ ೧ ಕೋಟಿ ರೂ.ಗಳಲ್ಲಿ ಸಮುದಾಯ ಭವನ ನಿರ್ಮಿಸಿದ್ದಾರೆ ಎಂದು ತಿಳಿಸಿದರು.
ಸಮಿತಿಗೆ ಆರಂಭದಲ್ಲಿ ೫೦ ಕೋಟಿ ರೂ. ಅನುದಾನ ನೀಡಲಾಗಿತ್ತು. ಈಗ ೯೦ ಕೋಟಿ ರೂ.ತನಕ ಏರಿಕೆಯಾಗಿದೆ. ಚರ್ಚ್ಗಳ ದುರಸ್ತಿ, ಸಮುದಾಯ ಭವನ ನಿರ್ಮಾಣ, ಸ್ಮಶಾನಗಳಿಗೆ ಕಾಂಪೌಂಡ್, ವೃದ್ಧಾಶ್ರಮಗಳಿಗೆ ಅನುದಾನ ವಿತರಿಸಲಾಗಿದೆ ಎಂದು ಹೇಳಿದರು.
ವಿದೇಶಕ್ಕೆ ವ್ಯಾಸಂಗ ವಾಡಲು ಹೋಗುವ ಕ್ರೈಸ್ತ ವಿದ್ಯಾರ್ಥಿಗಳಿಗೆ 20 ಲಕ್ಷ ರೂ. ತನಕ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಜಿಲ್ಲೆಯ ಕ್ರೈಸ್ತ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಹೆಚ್ಚಿನ ಅನುದಾನ ಪಡೆದಿರುವುದು ಗಮನಾರ್ಹ ಎಂದು ಮೆಚ್ಚುಗೆ ಸೂಚಿಸಿದರು.
ಸಮಿತಿಯಿಂದ ಸಾಲ ಸೌಲಭ್ಯ ಯೋಜನೆಗಳು, ಶೈಕ್ಷಣಿಕ ಸಾಲ ಹೆಚ್ಚಳ ಮಾಡಲು ಉದ್ದೇಶಿಸಲಾಗಿದೆ. ಒಟ್ಟಾರೆ ರಾಜ್ಯದ ಕ್ರೈಸ್ತರ ಅಭಿವೃದ್ಧಿಗೆ ಸಮಿತಿಯು ಬದ್ಧವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿ ಮಧುಕುವಾರ್, ಕ್ರಿಶ್ಚಿಯನ್ ಡೆವಲಪ್ಮೆಂಟ್ ಕೌನ್ಸಿಲ್ನ ಕಾರ್ಯದರ್ಶಿ ವಾರ್ಟಿನ್ ಹಾಜರಿದ್ದರು.
ಬಿಜೆಪಿ ತಾರತಮ್ಯ ಮಾಡುತ್ತಿಲ್ಲ
ಬಿಜೆಪಿ ಸರ್ಕಾರ ಯಾವುದೇ ಸಮುದಾಯದ ನಡುವೆ ತಾರತಮ್ಯ ಮಾಡುತ್ತಿಲ್ಲ. ಕ್ರೈಸ್ತರು ಗೊಂದಲಕ್ಕೆ ಒಳಗಾಗಬಾರದು ಎಂದು ಜೆ.ಕೆನಡಿ ಶಾಂತಕುಮಾರ್ ತಿಳಿಸಿದರು. ಕ್ರೈಸ್ತರ ಕಲ್ಯಾಣಕ್ಕೆ ಸಮಿತಿ ರಚಿಸಿ ಅನುದಾನ ನೀಡಿದ್ದ ಯಡಿಯೂರಪ್ಪ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಕ್ರೈಸ್ತರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಸರ್ಕಾರದಿಂದ ಹಲವು ಹಳೇ ಕಾಲದ ಚರ್ಚ್ಗಳು ದುರಸ್ತಿಗೊಂಡಿವೆ. ಸಮುದಾಯ ಭವನಗಳು ನಿರ್ವಾಣವಾಗಿವೆ. ಬಿಜೆಪಿಯ ಸಮುದಾಯದ ಬಗ್ಗೆ ಕಾಳಜಿ ಹೊಂದಿದೆ ಎಂಬುದು ಇದರಿಂದ ಗೊತ್ತಾಗುತ್ತಿದೆ ಎಂದರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…