ಶ್ರೀರಂಗಪಟ್ಟಣ : ವಿಶ್ವ ಪ್ರಸಿದ್ಧ ಕೆಆರ್ ಎಸ್ ಬೃಂದಾವನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಶುಕ್ರವಾರ ಎಂದಿನಂತೆ ಪ್ರವಾಸಿಗರಿಂದ ಶುಲ್ಕ ಪಡೆದು ಬೃಂದಾವನ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ದಿಢೀರ್ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸಲಾಗಿದೆ. ಆ ವೇಳೆ ಪ್ರವಾಸಿಗರು ಹಾಗೂ ಸಿಬ್ಬಂದಿ ವಿರುದ್ಧ ಮಾತಿನ ಚಕಮಕಿಯೂ ನಡೆದಿದೆ. ವಾರದ ಹಿಂದೆಯೇ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಬೋನು ಇಟ್ಟಿದ್ದರೂ ಚಿರತೆ ಬೋನಿಗೆ ಬಿದ್ದಿರಲಿಲ್ಲ. ಆದರೂ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದು ಚರ್ಚೆಗೆ ಗ್ರಾಸವಾಗಿದೆ.
ಇಂದು ಪ್ರವೇಶ ನಿಷೇಧ:
ಶನಿವಾರ ಕೆಆರ್ ಎಸ್ ಬೃಂದಾವನ ಪ್ರವಾಸಿಗರ ಪ್ರವೇಶ ನಿಷೇಧಿಸಿ ಕಾವೇರಿ ನೀರಾವರಿ ನಿಗಮ ಇಇ ರಾಮಮೂರ್ತಿ ಆದೇಶ ನೀಡಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದೆ ಚಿರತೆ ಪ್ರತ್ಯಕ್ಷವಾಗಿತ್ತು ಆ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಪ್ರವಾಸಿಗರಿಗೆ ಪ್ರವೇಶ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿದಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…