ಜಿಲ್ಲೆಗಳು

ಕರಾಮುವಿ : ಕುಲಪತಿ ನೇಮಕ ಪ್ರಕ್ರಿಯೆ ಶುರು

ಕುಲಪತಿ, ಕುಲಸಚಿವ ಹುದ್ದೆಗಳೆರಡೂ ಪ್ರಭಾರ
ಮೈಸೂರು:ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಕೇಂದ್ರವೆಂದು ಹೆಸರು ಪಡೆದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನೂತನ ಕುಲಪತಿಯನ್ನು ನೇಮಿಸುವ ಸಂಬಂಧ ಶೀಘ್ರದಲ್ಲೇ ಸರ್ಚ್ ಕಮಿಟಿ ನೇಮಕ ಮಾಡಲಾಗುತ್ತಿದ್ದು, ಅಕ್ಟೋಬರ್ ಅಂತ್ಯದೊಳಗೆ ಕುಲಪತಿ ಸ್ಥಾನಕ್ಕೆ ಹೊಸಬರನ್ನು ನಿಯೋಜಿಸುವ ಸಾಧ್ಯತೆ ಇದೆ.
ಇದಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲುಂದ ಕುಲಪತಿ ಹುದ್ದೆಗೆ ಅರ್ಹತೆಯುಳ್ಳ ಪ್ರಾಧ್ಯಾಪಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕುಲಪತಿಯಾಗಿದ್ದ ಪ್ರೊ.ಎಸ್.ವಿದ್ಯಾಶಂಕರ್ ಅವರು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ನಿಯೋಜನೆಗೊಂಡಿದ್ದರಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಎರಡು ಮಹತ್ವದ ಹುದ್ದೆಗಳು ಖಾಲಿಯಾಗಿದೆ.
ಮುಕ್ತ ವಿವಿಯ ಕುಲಸಚಿವರಾಗಿದ್ದ ಪ್ರೊ.ಆರ್.ರಾಜಣ್ಣ ಅವರ ಸೇವಾವಧಿ ಜೂನ್‌ನಲ್ಲೇ ಮುಗಿದಿದ್ದರಿಂದ ತೆರವಾದ ಸ್ಥಾನಕ್ಕೆ ಹಣಕಾಸು ಅಧಿಕಾರಿ ಡಾ.ಎ.ಖಾದರ್‌ಪಾಷ ಅವರು ಪ್ರಭಾರ ಕುಲಪತಿ ಹಾಗೂ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಹೀಗಾಗಿ, ಆಡಳಿತಾತ್ಮಕ ಮತ್ತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗದ ಕಾರಣ ಶೀಘ್ರದಲ್ಲೇ ಕುಲಪತಿ ಹುದ್ದೆಯನ್ನು ನೇಮಿಸುವುದಕ್ಕೆ ರಾಜ್ಯಪಾಲರು ನಿರ್ಧರಿಸಿದ್ದಾರೆ.
ಅಭ್ಯರ್ಥಿಗಳು ವಿಶ್ವವಿದ್ಯಾಲಯ ಧನ ಸಹಾಯಗಳ ಆಯೋಗದ ವಾರ್ಗಸೂಚಿಗಳು ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಅಧಿನಿಯಮ, ೧೯೯೨ ರನ್ವಯ ಕನಿಷ್ಠ ೧೦ ವರ್ಷಗಳ ಕಾಲ ಪ್ರಾಧ್ಯಾಪಕರ ಅಥವಾ ತತ್ಸವಾನ ಹುದ್ದೆಯ ಕಾರ್ಯಾನುಭವ ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.
ಶೀಘ್ರ ಕಮಿಟಿ ನೇಮಕ: ಕುಲಪತಿ ನೇಮಕಕ್ಕೆ ಸಂಬಂಧಿಸಿದ ಹಿರಿಯ ಶಿಕ್ಷಣ ತಜ್ಞರನ್ನೊಳಗೊಂಡ ಸರ್ಚ್ ಕಮಿಟಿಯನ್ನು ನೇಮಕ ಮಾಡಲಾಗುತ್ತದೆ. ಅರ್ಜಿ ಹಾಕುವ ಪ್ರತಿಯೊಬ್ಬರ ಬಗ್ಗೆ ಸಂಪೂರ್ಣ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ ನಂತರ ಮೂವರು ಹೆಸರನ್ನು ಶಿಫಾರಸ್ಸು ಮಾಡಲಾಗುತ್ತದೆ. ಈ ಮೂವರಲ್ಲಿ ಯಾರನ್ನು ಬೇಕಾದರೂ ನೇಮಿಸುವ ಅಧಿಕಾರ ರಾಜ್ಯಪಾಲರಿಗೆ ಇರುತ್ತದೆ. ಒಂದು ವೇಳೆ ರಾಜ್ಯಪಾಲರೇ ರಾಜಭವನದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ನೇರವಾಗಿ ನೇಮಕ ಮಾಡಿ ಆದೇಶ ಹೊರಡಿಸುವುದು ಸರ್ವೆ ಸಾಮಾನ್ಯವಾಗಿದೆ.


ಸದ್ದಿಲ್ಲದೆ ಹಲವರ ಲಾಬಿ
ಕುಲಪತಿ ಸ್ಥಾನಕ್ಕೆ ಹಲವರು ಅರ್ಜಿ ಸಲ್ಲಿಸಿದ ಬಳಿಕ ಲಾಭಿ ಆರಂಭಿಸುವ ಸಾಧ್ಯತೆ ಇದೆ. ಈಗಾಗಲೇ ಮೈಸೂರು ವಿವಿ,ಮುಕ್ತ ವಿವಿಯ ಕುಲಸಚಿವರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿಯಾಗಿರುವ ಪ್ರೊ.ಆರ್.ರಾಜಣ್ಣ, ಅದೇ ರೀತಿ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ್ ಕುಲಪತಿ ಸ್ಥಾನದ ಮೇಲೂ ಕಣ್ಣಿಟ್ಟಿದ್ದಾರೆ. ಅ.೨೭ಕ್ಕೆ ಅರ್ಜಿ ಸಲ್ಲಿಸುವ ಗಡುವು ಮುಕ್ತಾಯವಾಗಲಿದೆ. ರಾಜಕೀಯ ಪ್ರಭಾವ,ಜಾತಿ ಮತ್ತು ರಾಜ್ಯಪಾಲರ ಮನಗೆಲ್ಲುವವರಿಗೆ ಕುಲಪತಿ ಹುದ್ದೆ ಒಲಿಯಲಿದೆ. ಈ ಮೊದಲು ರಾಜ್ಯಸರ್ಕಾರ ನೇಮಕ ಮಾಡುತ್ತಿದ್ದಾಗ ಸಚಿವರು,ಶಾಸಕರು ತಮ್ಮ ಹತ್ತಿರದ ವ್ಯಕ್ತಿಗಳ ಪರವಾಗಿ ಲಾಬಿ ಮಾಡುತ್ತಿದ್ದರು.ಈಗ ರಾಜ್ಯಪಾಲರು ನೇಮಕ ಮಾಡುವ ಕಾರಣ ದೊಡ್ಡಮಟ್ಟದಲ್ಲಿ ಶಿಫಾರಸ್ಸು ಮಾಡಿಸಿದವರಿಗೆ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

7 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

10 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

12 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

12 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

12 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

13 hours ago