ಜಿಲ್ಲೆಗಳು

ಕರಾಮುವಿ : ಕುಲಪತಿ ನೇಮಕ ಪ್ರಕ್ರಿಯೆ ಶುರು

ಕುಲಪತಿ, ಕುಲಸಚಿವ ಹುದ್ದೆಗಳೆರಡೂ ಪ್ರಭಾರ
ಮೈಸೂರು:ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಕೇಂದ್ರವೆಂದು ಹೆಸರು ಪಡೆದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನೂತನ ಕುಲಪತಿಯನ್ನು ನೇಮಿಸುವ ಸಂಬಂಧ ಶೀಘ್ರದಲ್ಲೇ ಸರ್ಚ್ ಕಮಿಟಿ ನೇಮಕ ಮಾಡಲಾಗುತ್ತಿದ್ದು, ಅಕ್ಟೋಬರ್ ಅಂತ್ಯದೊಳಗೆ ಕುಲಪತಿ ಸ್ಥಾನಕ್ಕೆ ಹೊಸಬರನ್ನು ನಿಯೋಜಿಸುವ ಸಾಧ್ಯತೆ ಇದೆ.
ಇದಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲುಂದ ಕುಲಪತಿ ಹುದ್ದೆಗೆ ಅರ್ಹತೆಯುಳ್ಳ ಪ್ರಾಧ್ಯಾಪಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕುಲಪತಿಯಾಗಿದ್ದ ಪ್ರೊ.ಎಸ್.ವಿದ್ಯಾಶಂಕರ್ ಅವರು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ನಿಯೋಜನೆಗೊಂಡಿದ್ದರಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಎರಡು ಮಹತ್ವದ ಹುದ್ದೆಗಳು ಖಾಲಿಯಾಗಿದೆ.
ಮುಕ್ತ ವಿವಿಯ ಕುಲಸಚಿವರಾಗಿದ್ದ ಪ್ರೊ.ಆರ್.ರಾಜಣ್ಣ ಅವರ ಸೇವಾವಧಿ ಜೂನ್‌ನಲ್ಲೇ ಮುಗಿದಿದ್ದರಿಂದ ತೆರವಾದ ಸ್ಥಾನಕ್ಕೆ ಹಣಕಾಸು ಅಧಿಕಾರಿ ಡಾ.ಎ.ಖಾದರ್‌ಪಾಷ ಅವರು ಪ್ರಭಾರ ಕುಲಪತಿ ಹಾಗೂ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಹೀಗಾಗಿ, ಆಡಳಿತಾತ್ಮಕ ಮತ್ತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗದ ಕಾರಣ ಶೀಘ್ರದಲ್ಲೇ ಕುಲಪತಿ ಹುದ್ದೆಯನ್ನು ನೇಮಿಸುವುದಕ್ಕೆ ರಾಜ್ಯಪಾಲರು ನಿರ್ಧರಿಸಿದ್ದಾರೆ.
ಅಭ್ಯರ್ಥಿಗಳು ವಿಶ್ವವಿದ್ಯಾಲಯ ಧನ ಸಹಾಯಗಳ ಆಯೋಗದ ವಾರ್ಗಸೂಚಿಗಳು ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಅಧಿನಿಯಮ, ೧೯೯೨ ರನ್ವಯ ಕನಿಷ್ಠ ೧೦ ವರ್ಷಗಳ ಕಾಲ ಪ್ರಾಧ್ಯಾಪಕರ ಅಥವಾ ತತ್ಸವಾನ ಹುದ್ದೆಯ ಕಾರ್ಯಾನುಭವ ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.
ಶೀಘ್ರ ಕಮಿಟಿ ನೇಮಕ: ಕುಲಪತಿ ನೇಮಕಕ್ಕೆ ಸಂಬಂಧಿಸಿದ ಹಿರಿಯ ಶಿಕ್ಷಣ ತಜ್ಞರನ್ನೊಳಗೊಂಡ ಸರ್ಚ್ ಕಮಿಟಿಯನ್ನು ನೇಮಕ ಮಾಡಲಾಗುತ್ತದೆ. ಅರ್ಜಿ ಹಾಕುವ ಪ್ರತಿಯೊಬ್ಬರ ಬಗ್ಗೆ ಸಂಪೂರ್ಣ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ ನಂತರ ಮೂವರು ಹೆಸರನ್ನು ಶಿಫಾರಸ್ಸು ಮಾಡಲಾಗುತ್ತದೆ. ಈ ಮೂವರಲ್ಲಿ ಯಾರನ್ನು ಬೇಕಾದರೂ ನೇಮಿಸುವ ಅಧಿಕಾರ ರಾಜ್ಯಪಾಲರಿಗೆ ಇರುತ್ತದೆ. ಒಂದು ವೇಳೆ ರಾಜ್ಯಪಾಲರೇ ರಾಜಭವನದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ನೇರವಾಗಿ ನೇಮಕ ಮಾಡಿ ಆದೇಶ ಹೊರಡಿಸುವುದು ಸರ್ವೆ ಸಾಮಾನ್ಯವಾಗಿದೆ.


ಸದ್ದಿಲ್ಲದೆ ಹಲವರ ಲಾಬಿ
ಕುಲಪತಿ ಸ್ಥಾನಕ್ಕೆ ಹಲವರು ಅರ್ಜಿ ಸಲ್ಲಿಸಿದ ಬಳಿಕ ಲಾಭಿ ಆರಂಭಿಸುವ ಸಾಧ್ಯತೆ ಇದೆ. ಈಗಾಗಲೇ ಮೈಸೂರು ವಿವಿ,ಮುಕ್ತ ವಿವಿಯ ಕುಲಸಚಿವರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿಯಾಗಿರುವ ಪ್ರೊ.ಆರ್.ರಾಜಣ್ಣ, ಅದೇ ರೀತಿ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ್ ಕುಲಪತಿ ಸ್ಥಾನದ ಮೇಲೂ ಕಣ್ಣಿಟ್ಟಿದ್ದಾರೆ. ಅ.೨೭ಕ್ಕೆ ಅರ್ಜಿ ಸಲ್ಲಿಸುವ ಗಡುವು ಮುಕ್ತಾಯವಾಗಲಿದೆ. ರಾಜಕೀಯ ಪ್ರಭಾವ,ಜಾತಿ ಮತ್ತು ರಾಜ್ಯಪಾಲರ ಮನಗೆಲ್ಲುವವರಿಗೆ ಕುಲಪತಿ ಹುದ್ದೆ ಒಲಿಯಲಿದೆ. ಈ ಮೊದಲು ರಾಜ್ಯಸರ್ಕಾರ ನೇಮಕ ಮಾಡುತ್ತಿದ್ದಾಗ ಸಚಿವರು,ಶಾಸಕರು ತಮ್ಮ ಹತ್ತಿರದ ವ್ಯಕ್ತಿಗಳ ಪರವಾಗಿ ಲಾಬಿ ಮಾಡುತ್ತಿದ್ದರು.ಈಗ ರಾಜ್ಯಪಾಲರು ನೇಮಕ ಮಾಡುವ ಕಾರಣ ದೊಡ್ಡಮಟ್ಟದಲ್ಲಿ ಶಿಫಾರಸ್ಸು ಮಾಡಿಸಿದವರಿಗೆ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

andolanait

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

7 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

7 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

8 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

9 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

9 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

11 hours ago