ಜಿಲ್ಲೆಗಳು

ಕರಾಮುವಿ : ಕುಲಪತಿ ನೇಮಕ ಪ್ರಕ್ರಿಯೆ ಶುರು

ಕುಲಪತಿ, ಕುಲಸಚಿವ ಹುದ್ದೆಗಳೆರಡೂ ಪ್ರಭಾರ
ಮೈಸೂರು:ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಕೇಂದ್ರವೆಂದು ಹೆಸರು ಪಡೆದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನೂತನ ಕುಲಪತಿಯನ್ನು ನೇಮಿಸುವ ಸಂಬಂಧ ಶೀಘ್ರದಲ್ಲೇ ಸರ್ಚ್ ಕಮಿಟಿ ನೇಮಕ ಮಾಡಲಾಗುತ್ತಿದ್ದು, ಅಕ್ಟೋಬರ್ ಅಂತ್ಯದೊಳಗೆ ಕುಲಪತಿ ಸ್ಥಾನಕ್ಕೆ ಹೊಸಬರನ್ನು ನಿಯೋಜಿಸುವ ಸಾಧ್ಯತೆ ಇದೆ.
ಇದಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲುಂದ ಕುಲಪತಿ ಹುದ್ದೆಗೆ ಅರ್ಹತೆಯುಳ್ಳ ಪ್ರಾಧ್ಯಾಪಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕುಲಪತಿಯಾಗಿದ್ದ ಪ್ರೊ.ಎಸ್.ವಿದ್ಯಾಶಂಕರ್ ಅವರು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ನಿಯೋಜನೆಗೊಂಡಿದ್ದರಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಎರಡು ಮಹತ್ವದ ಹುದ್ದೆಗಳು ಖಾಲಿಯಾಗಿದೆ.
ಮುಕ್ತ ವಿವಿಯ ಕುಲಸಚಿವರಾಗಿದ್ದ ಪ್ರೊ.ಆರ್.ರಾಜಣ್ಣ ಅವರ ಸೇವಾವಧಿ ಜೂನ್‌ನಲ್ಲೇ ಮುಗಿದಿದ್ದರಿಂದ ತೆರವಾದ ಸ್ಥಾನಕ್ಕೆ ಹಣಕಾಸು ಅಧಿಕಾರಿ ಡಾ.ಎ.ಖಾದರ್‌ಪಾಷ ಅವರು ಪ್ರಭಾರ ಕುಲಪತಿ ಹಾಗೂ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಹೀಗಾಗಿ, ಆಡಳಿತಾತ್ಮಕ ಮತ್ತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗದ ಕಾರಣ ಶೀಘ್ರದಲ್ಲೇ ಕುಲಪತಿ ಹುದ್ದೆಯನ್ನು ನೇಮಿಸುವುದಕ್ಕೆ ರಾಜ್ಯಪಾಲರು ನಿರ್ಧರಿಸಿದ್ದಾರೆ.
ಅಭ್ಯರ್ಥಿಗಳು ವಿಶ್ವವಿದ್ಯಾಲಯ ಧನ ಸಹಾಯಗಳ ಆಯೋಗದ ವಾರ್ಗಸೂಚಿಗಳು ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಅಧಿನಿಯಮ, ೧೯೯೨ ರನ್ವಯ ಕನಿಷ್ಠ ೧೦ ವರ್ಷಗಳ ಕಾಲ ಪ್ರಾಧ್ಯಾಪಕರ ಅಥವಾ ತತ್ಸವಾನ ಹುದ್ದೆಯ ಕಾರ್ಯಾನುಭವ ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.
ಶೀಘ್ರ ಕಮಿಟಿ ನೇಮಕ: ಕುಲಪತಿ ನೇಮಕಕ್ಕೆ ಸಂಬಂಧಿಸಿದ ಹಿರಿಯ ಶಿಕ್ಷಣ ತಜ್ಞರನ್ನೊಳಗೊಂಡ ಸರ್ಚ್ ಕಮಿಟಿಯನ್ನು ನೇಮಕ ಮಾಡಲಾಗುತ್ತದೆ. ಅರ್ಜಿ ಹಾಕುವ ಪ್ರತಿಯೊಬ್ಬರ ಬಗ್ಗೆ ಸಂಪೂರ್ಣ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ ನಂತರ ಮೂವರು ಹೆಸರನ್ನು ಶಿಫಾರಸ್ಸು ಮಾಡಲಾಗುತ್ತದೆ. ಈ ಮೂವರಲ್ಲಿ ಯಾರನ್ನು ಬೇಕಾದರೂ ನೇಮಿಸುವ ಅಧಿಕಾರ ರಾಜ್ಯಪಾಲರಿಗೆ ಇರುತ್ತದೆ. ಒಂದು ವೇಳೆ ರಾಜ್ಯಪಾಲರೇ ರಾಜಭವನದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ನೇರವಾಗಿ ನೇಮಕ ಮಾಡಿ ಆದೇಶ ಹೊರಡಿಸುವುದು ಸರ್ವೆ ಸಾಮಾನ್ಯವಾಗಿದೆ.


ಸದ್ದಿಲ್ಲದೆ ಹಲವರ ಲಾಬಿ
ಕುಲಪತಿ ಸ್ಥಾನಕ್ಕೆ ಹಲವರು ಅರ್ಜಿ ಸಲ್ಲಿಸಿದ ಬಳಿಕ ಲಾಭಿ ಆರಂಭಿಸುವ ಸಾಧ್ಯತೆ ಇದೆ. ಈಗಾಗಲೇ ಮೈಸೂರು ವಿವಿ,ಮುಕ್ತ ವಿವಿಯ ಕುಲಸಚಿವರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿಯಾಗಿರುವ ಪ್ರೊ.ಆರ್.ರಾಜಣ್ಣ, ಅದೇ ರೀತಿ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ್ ಕುಲಪತಿ ಸ್ಥಾನದ ಮೇಲೂ ಕಣ್ಣಿಟ್ಟಿದ್ದಾರೆ. ಅ.೨೭ಕ್ಕೆ ಅರ್ಜಿ ಸಲ್ಲಿಸುವ ಗಡುವು ಮುಕ್ತಾಯವಾಗಲಿದೆ. ರಾಜಕೀಯ ಪ್ರಭಾವ,ಜಾತಿ ಮತ್ತು ರಾಜ್ಯಪಾಲರ ಮನಗೆಲ್ಲುವವರಿಗೆ ಕುಲಪತಿ ಹುದ್ದೆ ಒಲಿಯಲಿದೆ. ಈ ಮೊದಲು ರಾಜ್ಯಸರ್ಕಾರ ನೇಮಕ ಮಾಡುತ್ತಿದ್ದಾಗ ಸಚಿವರು,ಶಾಸಕರು ತಮ್ಮ ಹತ್ತಿರದ ವ್ಯಕ್ತಿಗಳ ಪರವಾಗಿ ಲಾಬಿ ಮಾಡುತ್ತಿದ್ದರು.ಈಗ ರಾಜ್ಯಪಾಲರು ನೇಮಕ ಮಾಡುವ ಕಾರಣ ದೊಡ್ಡಮಟ್ಟದಲ್ಲಿ ಶಿಫಾರಸ್ಸು ಮಾಡಿಸಿದವರಿಗೆ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago