ಜಿಲ್ಲೆಗಳು

KSOU 2013-14, 2014-15 ಸಾಲಿನ ವಿದ್ಯಾರ್ಥಿಗಳಿಗೆ ಕೊನೆಗೂ ನೆಮ್ಮದಿ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ೨೦೧೩-೧೪, ೨೦೧೪-೨೦೧೫ ನೇ ಸಾಲುಗಳ ಯುಜಿಸಿ ಮಾನ್ಯತೆ ತೊಡಕಿಗೆ ಸಿಲುಕಿದ್ದ ಇನ್‌ಹೌಸ್ ಅಡ್ಮಿಟೆಡ್ ನಾನ್ ಟೆಕ್ನಿಕಲ್ ಕೋರ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಉಚ್ಚ ನ್ಯಾಯಾಲಯ ಗುರುವಾರ ಸಿಹಿ ಸುದ್ಧಿ ನೀಡಿದೆ.

ಕರಾಮುವಿ ೨ ತಿಂಗಳ ಅವಧಿಯೊಳಗೆ ಪರಿನಿಯಮಾನುಸಾರ ಪರೀಕ್ಷೆ ಬರೆದು ಪಾಸಾದ ಸದರಿ ಸಾಲುಗಳ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಹಾಗೂ ಪದವಿಗಳನ್ನು ನೀಡುವಂತೆ ಉಚ್ಚ ನ್ಯಾಯಾಲಯ  ಆದೇಶಿಸಿದೆ. ಜತೆಗೆ ರಾಜ್ಯ ಸರ್ಕಾರ ಹಾಗೂ ಅಂಗ ಸಂಸ್ಥೆಗಳು ಸದರಿ ಸಾಲಿನ ವಿದ್ಯಾರ್ಥಿಗಳ ಪದವಿ ಪರಿಗಣಿಸುವಂತೆಯೂ ನ್ಯಾಯಾಲಯ ಸೂಚಿಸಿದೆ.

ಪ್ರಕರಣದ ಹಿನ್ನೆಲೆ ಇಂತಿದೆ.

೨೦೧೩ ನೇ ಸಾಲಿಗಿಂತ ಹಿಂದಿನ ಮಾನ್ಯತೆ ಇದ್ದ ಅವದಿಯ ವಿವಿ ಪದವಿಗಳನ್ನೂ ತಿರಸ್ಕರಿಸುತ್ತಿದ್ದ ಕಾರಣ ರಾಜ್ಯ ಸರ್ಕಾರ ಹಾಗೂ ಕೆಪಿಎಸ್‌ಸಿ ವಿರುದ್ದ ನ್ಯಾಯಾಲಯದ ಮೊರೆ ಹೋಗಲಾಗಿತ್ತು. ( ಡಬ್ಲ್ಯುಪಿ ೩೪೨೫೫/೨೦೧೬ರ ೨೭.೬.೨೦೧೭). ಪ್ರಕರಣದಲ್ಲಿ ವಿವಿ ಪರ ತೀರ್ಪಿನಂತೆ ವಿವಿ ಪದವೀದರನ್ನು ಪರಿಗಣಿಸಲು ಅನುಕೂಲ ಮಾಡಿಕೊಡಲಾಗಿತ್ತು.

ಕರಾಮುವಿ ಶಿಕ್ಷಕೇತರ ನೌಕರರ ಸಂಘ(ರಿ) ಸಲ್ಲಿಸಿರುವ ಡಬ್ಲ್ಯುಪಿ ೪೮೩೭೯/೨೦೧೭ ಪ್ರಕರಣದಲ್ಲಿನ ೦೧.೦೨.೨೦೧೮ರ ಮಧ್ಯಂತರ ಆದೇಶ  ಅನ್ವಯ ರಾಜ್ಯ ಸರ್ಕಾರ ೦೩.೦೫.೨೦೧೮ ರಂದು ಆದೇಶ ಹೊರಡಿಸಿ ಕರಾಮುವಿಯ ೨೦೧೩-೧೪, ೨೦೧೪-೨೦೧೫ನೇ ಸಾಲುಗಳ ಯುಜಿಸಿ ಮಾನ್ಯತೆ ತೊಡಕಿಗೆ ಸಿಲುಕಿದ್ದ ಇನ್‌ಹೌಸ್ ಅಡ್ಮಿಟೆಡ್ ನಾನ್ ಟೆಕ್ನಿಕಲ್ ಕೋರ್ಸ್ ವಿದ್ಯಾರ್ಥಿಗಳ ಪದವಿಗಳನ್ನು ನೇಮಕಾತಿ/ಬಡ್ತಿ ಹಾಗೂ ಉನ್ನತ ವ್ಯಾಸಂಗಕ್ಕೆ ಪರಿಗಣಿಸಲು ಆದೇಶಿಸಿತ್ತು. ಈ ಅವಧಿಯಲ್ಲಿ ಕುಲಪತಿಯಾಗಿದ್ದ ಪ್ರೊ.ಶಿವಲಿಂಗಯ್ಯ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆ ಮೂಲಕ ಅವರ ಹಿಂದಿನ  ಶ್ರಮವೂ ನ್ಯಾಯಾಲಯದ ಈ ಆದೇಶಕ್ಕೆ ಕಾರಣವಾಗಿದೆ.

ಮೇಲಿನ ತೀರ್ಪಿಗೊಳಪಟ್ಟಿರುವ ಪ್ರಕರಣಗಳಲ್ಲಿನ ಮಧ್ಯಂತರ ಆದೇಶ ಆಧಾರದಲ್ಲಿ ವಿವಿಯು ೨೦೧೯ ರಿಂದಲೂ ಅಂಕಪಟ್ಟಿ ಹಾಗೂ ಪ್ರಾವಿಷನಲ್ ಪಾಸ್ ಸರ್ಟಿಫಿಕೇಟ್ ನೀಡುತ್ತಾ ಬರುತ್ತಿದೆ.

ಪ್ರಸ್ತುತ ೦೩.೦೮.೨೦೨೨ರ ಸಾಮಾನ್ಯ ಆದೇಶಕ್ಕೆ ಒಳಪಟ್ಟಿರುವ  ಒಳಪಟ್ಟಿರುವ ೨೦೧೩-೧೪ ಮತ್ತು ೨೦೧೪-೧೫ ಇನ್ ಹೌಸ್ ವಿದ್ಯಾರ್ಥಿಗಳ ಈ ಪ್ರಕರಣಗಳಲ್ಲಿ ಯುಜಿಸಿ ವಿರುದ್ಧ ಮುಖ್ಯ ಮನವಿ  ಇದ್ದು, ಅವರ ಶಿಕ್ಷಣ ಕ್ರಮ ಮತ್ತು ಪದವಿಗಳು ತಾಂತ್ರಿಕವಾಗಿ ನಿಯಮಾನುಸಾರ ವಿದ್ದುದರಿಂದ ಹಾಗೂ ಯುಜಿಸಿ ತಜ್ಞರ ಸಮಿತಿ ವಿವಿಯಿಂದ ನೇರವಾಗಿ ನಿರ್ವಹಿಸಲ್ಪಡುವ ಈ ಪ್ರವೇಶಾತಿ/ ಪದವಿಗಳ ಬಗ್ಗೆ ಯಾವುದೇ ತಕರಾರು ವ್ಯಕ್ತಪಡಿಸದಿದ್ದುದರಿಂದ ವಿದ್ಯಾರ್ಥಿಗಳಿಗೆ ಒತ್ತಾಸೆಯಾಗಿಯೇ ವಿವಿ ಪರವಾದ ಹಾಗೂ ದಾಖಲೆಗಳನ್ನು ಮಂಡಿಸಲಾಗಿದ್ದು ಈ ದಿವಸ ಈ ಮಹತ್ವದ ತೀರ್ಪಿಗೆ ದಾರಿಯಾಗಿದೆ.

ತೀರ್ಪಿನಲ್ಲಿ, ಕರಾಮುವಿಯು ೨ ತಿಂಗಳ ಅವಧಿಯೊಳಗೆ ಪರಿನಿಯಮಾನುಸಾರ ಪರೀಕ್ಷೆ ಬರೆದು ಪಾಸಾದ ಸದರಿ ಸಾಲುಗಳ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಹಾಗೂ ಪದವಿಗಳನ್ನು ನೀಡುವಂತೆ ಆದೇಶಿಸಿದೆ. ಜತೆಗೆ ರಾಜ್ಯ ಸರ್ಕಾರ ಹಾಗೂ ಅಂಗ ಸಂಸ್ಥೆಗಳು ಸದರಿ ಸಾಲಿನ ವಿದ್ಯಾರ್ಥಿಗಳ ಪದವಿ ಪರಿಗಣಿಸುವಂತೆ ಸೂಚಿಸಿದೆ.

ಯುಜಿಸಿ, ೬ ವಾರಗಳ ಅವದಿಯೊಳಗೆ ವಿಚಾರಣೆಯನ್ನು ನಡೆಸಿ ಕರಾಮುವಿಯ ಒಡಿಎಲ್  ಮತ್ತು ಇನ್ ಹೌಸ್ ವ್ಯವಸ್ಥೆಯ ಮೂಲಕ ರಿಟ್ ಅರ್ಜಿದಾರರ ವ್ಯಾಸಂಗವಾಗಿದೆಯೇ, ಈ ಸಂದರ್ಭದಲ್ಲಿ ವಿವಿಯಿಂದ ಯುಜಿಸಿಯ ನಿಯಮಗಳು, ಶೈಕ್ಷಣಿಕ ಮಾನದಂಡಗಳೇನಾದರೂ ಉಲ್ಲಂಘನೆಯಾಗಿವೆಯೇ ಎಂಬುದನ್ನು ಪರಿಶೀಲಿಸಿ ಮಾನ್ಯತೆ ನೀಡಲು ಪರಿಗಣಿಸತಕ್ಕದ್ದು ಹಾಗೂ ಈ ಪ್ರಕ್ರಿಯೆಗೆ ಕರಾಮುವಿಯು ಪೂರಕ ದಾಖಲೆಗಳನ್ನು ಒದಗಿಸತಕ್ಕದ್ದೆಂದು ಆದೇಶಿಸಿದೆ.

andolanait

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

6 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

6 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

7 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

8 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

8 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

10 hours ago