ಜಿಲ್ಲೆಗಳು

ಆ.12 ರಂದು ಕುಳುವ ನುಲಿಯ ಚಂದಯ್ಯ ಜಯಂತಿ ಆಚರಣೆಗೆ ನಿರ್ಧಾರ

ಮೈಸೂರು :  ರಾಜ್ಯಾದ್ಯಾಂತ ಕಾಯಕಯೋಗಿ ಶ್ರೀ ಕುಳುವ ನುಲಿಯ ಚಂದಯ್ಯ ಅವರ ಜಯಂತಿಯನ್ನು ಜಿಲ್ಲಾಡಳಿತ ಮೈಸೂರು ಆಚರಣೆ ಹಿನ್ನೆಲೆಯಲ್ಲಿ ನಗರ ಜಲದರ್ಶಿನಿ ಪ್ರವಾಸಿಮಂದಿರಲ್ಲಿ ಕುಳುವ ಸಮಾಜದ ವಿವಿಧ ತಾಲ್ಲೂಕಿನ ಪದಾಧಿಕಾರಿಗಳು ಮತ್ತು ಸಮುದಾಯದ ಪ್ರಜ್ಞಾವಂತರ ಸಭೆಯನ್ನು ನಿವೃತ್ತ ಜಿಲ್ಲಾಧಿಕಾರಿ ಎಸ್.ಟಿ ಅಂಜನ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜಯಂತಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.ಸಭೆಗೆ ಅಖಿಲ ಕರ್ನಾಟಕ ಕುಳುವ ಮಹಾ ಸಂಘ (ರಿ) ರಾಜ್ಯದ ಜಂಟಿ‌ ಕಾರ್ಯದರ್ಶಿ ಶ್ರೀ ಕಿರಣ್ ಕುಮಾರ್ ಕೊತ್ತಗೆರೆ ಮಾತನಾಡಿ ಚಂದಯ್ಯನವರ ಜಯಂತಿಯ‌ ಆಚರಣೆಗೆ ಆದೇಶ ಹೊರಡಿಸಿದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿರವರಿಗೆ ಇಡೀ ಜನಾಂಗದ ಪರವಾಗಿ ಹೃತ್ಪೂರ್ವಕವಾದ ಅಭಿನಂದನೆಯನ್ನು ಸಲ್ಲಿಸಲಾಯಿತು.

ಮುಂದುವರೆದು ಕುಳುವ ಸಮಾಜದ ಏಕೈಕ ಧಾರ್ಮಿಕ‌ ಅಸ್ಮಿತೆಯಾದ ಕಾಯಕಯೋಗಿ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾದ್ಯಾಂತ ಅತ್ಯಂತ ವಿಜೃಂಭಣೆಯಿಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲೆಯ ಎಲ್ಲ ಕುಳುವರು ಭಾಗವಹಿಸುವಂತೆ ನಿವೃತ್ತ ಐಎಎಸ್ ಅಧಿಕಾರಿ ಅಂಜನ್ ಕುಮಾರ್ ಮನವಿ ಮಾಡಿದರು. ಜಲದರ್ಶಿನಿ ಅತಿಥಿ ಗೃಹದಲ್ಲಿ ಸಮುದಾಯದ ಜಿಲ್ಲಾ,ತಾಲ್ಲೂಕು AKMS ಸಂಘಟನೆಯ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ,

ಎಕೆಎಂಎಸ್‌ ರಾಜ್ಯ ಸಂಘಟನೆಯ ನಿರಂತರ ಹೋರಾಟದ ಪ್ರಯತ್ನದ ಫಲವಾಗಿ ಇಂದು ಕುಳುವ ಸಮುದಾಯದ
12 ಶತಮಾನದ ದಾರ್ಶನಿಕ ಮಹಾಪುರುಷ ಶ್ರೀ ನುಲಿಯ ಚಂದಯ್ಯ ಅವರ ಜಯಂತಿ ಆಚರಣೆಯನ್ನು ಆ.12 ರಂದು ಜಿಲ್ಲಾಡಳಿತ ಆಚರಿಸಲು ನಿರ್ಧರಿಸಿದ್ದು. ಎಲ್ಲರೂ ಒಟ್ಟಾಗಿ ಸೇರಿ ಕಾರ್ಯಕ್ರಮ ಯಶಸ್ವಿಯಾಗಿಸಲು ಸಹಕರಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಹಿರಿಯ ಪತ್ರಕರ್ತರಾದ ಶ್ರೀ ತಿರುಮಲಾಪುರ ಕೆ.ಗೋಪಾಲ್ ಮಾತನಾಡಿ ಎಲ್ಲ ಶರಣರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಜಯಂತಿಯ ಮಾದರಿಯಲ್ಲಿ ಜಿಲ್ಲಾಡಳಿತ ಚಂದಯ್ಯನವರ ಜಯಂತಿಯನ್ನು ಆಚರಣೆ ನಿರ್ಧರಿಸಿರುವುದು ಸ್ವಾಗತಾರ್ಹ ಎಂದರು. ಸಭೆಯಲ್ಲಿ AKMS ರಾಜ್ಯ ಉಪಾಧ್ಯಕ್ಷರಾದ ವೆಂಕಟಾಚಲ, SC & ST ಅಲೆಮಾರಿ ಅಭಿವೃದ್ದಿ ಅನುಷ್ಠಾನ ಸಮಿತಿ‌ ಸದಸ್ಯರಾದ ನಾಗರಾಜು ಕೋಟೆ, ಮುತ್ತುರಾಜು ಪಿರಿಯಾಪಟ್ಟಣ,ರುಕ್ಮಾಗದ ತೊಂಡಾಳು,ಲೋಕೇಶ್ ಮುಧುವನಹಳ್ಳಿ,ಹೆಚ್ ಡಿ ಕೋಟೆ ತಾಲ್ಲೂಕು ಅಧ್ಯಕ್ಷ ಬಿ.ಜಿ ಮಹೇಂದ್ರ, ಟಿ ನರಸೀಪುರ ಅಧ್ಯಕ್ಷ ರವಿಕುಮಾರ್. ಮೈಸೂರು ನಗರ ಅಧ್ಯಕ್ಷ ಬಾಲರಾಜು, ಮತ್ತಿತರರು.ಇದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

9 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago