ಜಿಲ್ಲೆಗಳು

ಆ.12 ರಂದು ಕುಳುವ ನುಲಿಯ ಚಂದಯ್ಯ ಜಯಂತಿ ಆಚರಣೆಗೆ ನಿರ್ಧಾರ

ಮೈಸೂರು :  ರಾಜ್ಯಾದ್ಯಾಂತ ಕಾಯಕಯೋಗಿ ಶ್ರೀ ಕುಳುವ ನುಲಿಯ ಚಂದಯ್ಯ ಅವರ ಜಯಂತಿಯನ್ನು ಜಿಲ್ಲಾಡಳಿತ ಮೈಸೂರು ಆಚರಣೆ ಹಿನ್ನೆಲೆಯಲ್ಲಿ ನಗರ ಜಲದರ್ಶಿನಿ ಪ್ರವಾಸಿಮಂದಿರಲ್ಲಿ ಕುಳುವ ಸಮಾಜದ ವಿವಿಧ ತಾಲ್ಲೂಕಿನ ಪದಾಧಿಕಾರಿಗಳು ಮತ್ತು ಸಮುದಾಯದ ಪ್ರಜ್ಞಾವಂತರ ಸಭೆಯನ್ನು ನಿವೃತ್ತ ಜಿಲ್ಲಾಧಿಕಾರಿ ಎಸ್.ಟಿ ಅಂಜನ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜಯಂತಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.ಸಭೆಗೆ ಅಖಿಲ ಕರ್ನಾಟಕ ಕುಳುವ ಮಹಾ ಸಂಘ (ರಿ) ರಾಜ್ಯದ ಜಂಟಿ‌ ಕಾರ್ಯದರ್ಶಿ ಶ್ರೀ ಕಿರಣ್ ಕುಮಾರ್ ಕೊತ್ತಗೆರೆ ಮಾತನಾಡಿ ಚಂದಯ್ಯನವರ ಜಯಂತಿಯ‌ ಆಚರಣೆಗೆ ಆದೇಶ ಹೊರಡಿಸಿದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿರವರಿಗೆ ಇಡೀ ಜನಾಂಗದ ಪರವಾಗಿ ಹೃತ್ಪೂರ್ವಕವಾದ ಅಭಿನಂದನೆಯನ್ನು ಸಲ್ಲಿಸಲಾಯಿತು.

ಮುಂದುವರೆದು ಕುಳುವ ಸಮಾಜದ ಏಕೈಕ ಧಾರ್ಮಿಕ‌ ಅಸ್ಮಿತೆಯಾದ ಕಾಯಕಯೋಗಿ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾದ್ಯಾಂತ ಅತ್ಯಂತ ವಿಜೃಂಭಣೆಯಿಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲೆಯ ಎಲ್ಲ ಕುಳುವರು ಭಾಗವಹಿಸುವಂತೆ ನಿವೃತ್ತ ಐಎಎಸ್ ಅಧಿಕಾರಿ ಅಂಜನ್ ಕುಮಾರ್ ಮನವಿ ಮಾಡಿದರು. ಜಲದರ್ಶಿನಿ ಅತಿಥಿ ಗೃಹದಲ್ಲಿ ಸಮುದಾಯದ ಜಿಲ್ಲಾ,ತಾಲ್ಲೂಕು AKMS ಸಂಘಟನೆಯ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ,

ಎಕೆಎಂಎಸ್‌ ರಾಜ್ಯ ಸಂಘಟನೆಯ ನಿರಂತರ ಹೋರಾಟದ ಪ್ರಯತ್ನದ ಫಲವಾಗಿ ಇಂದು ಕುಳುವ ಸಮುದಾಯದ
12 ಶತಮಾನದ ದಾರ್ಶನಿಕ ಮಹಾಪುರುಷ ಶ್ರೀ ನುಲಿಯ ಚಂದಯ್ಯ ಅವರ ಜಯಂತಿ ಆಚರಣೆಯನ್ನು ಆ.12 ರಂದು ಜಿಲ್ಲಾಡಳಿತ ಆಚರಿಸಲು ನಿರ್ಧರಿಸಿದ್ದು. ಎಲ್ಲರೂ ಒಟ್ಟಾಗಿ ಸೇರಿ ಕಾರ್ಯಕ್ರಮ ಯಶಸ್ವಿಯಾಗಿಸಲು ಸಹಕರಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಹಿರಿಯ ಪತ್ರಕರ್ತರಾದ ಶ್ರೀ ತಿರುಮಲಾಪುರ ಕೆ.ಗೋಪಾಲ್ ಮಾತನಾಡಿ ಎಲ್ಲ ಶರಣರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಜಯಂತಿಯ ಮಾದರಿಯಲ್ಲಿ ಜಿಲ್ಲಾಡಳಿತ ಚಂದಯ್ಯನವರ ಜಯಂತಿಯನ್ನು ಆಚರಣೆ ನಿರ್ಧರಿಸಿರುವುದು ಸ್ವಾಗತಾರ್ಹ ಎಂದರು. ಸಭೆಯಲ್ಲಿ AKMS ರಾಜ್ಯ ಉಪಾಧ್ಯಕ್ಷರಾದ ವೆಂಕಟಾಚಲ, SC & ST ಅಲೆಮಾರಿ ಅಭಿವೃದ್ದಿ ಅನುಷ್ಠಾನ ಸಮಿತಿ‌ ಸದಸ್ಯರಾದ ನಾಗರಾಜು ಕೋಟೆ, ಮುತ್ತುರಾಜು ಪಿರಿಯಾಪಟ್ಟಣ,ರುಕ್ಮಾಗದ ತೊಂಡಾಳು,ಲೋಕೇಶ್ ಮುಧುವನಹಳ್ಳಿ,ಹೆಚ್ ಡಿ ಕೋಟೆ ತಾಲ್ಲೂಕು ಅಧ್ಯಕ್ಷ ಬಿ.ಜಿ ಮಹೇಂದ್ರ, ಟಿ ನರಸೀಪುರ ಅಧ್ಯಕ್ಷ ರವಿಕುಮಾರ್. ಮೈಸೂರು ನಗರ ಅಧ್ಯಕ್ಷ ಬಾಲರಾಜು, ಮತ್ತಿತರರು.ಇದ್ದರು.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

6 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

7 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

7 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

7 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

8 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

8 hours ago