ಮಡಿಕೇರಿ: ಕುಶಾಲನಗರ ತಾಲ್ಲೂಕಿನ ಅತ್ತೂರು ನಲ್ಲೂರು ಗ್ರಾಮದಲ್ಲಿ ಶುಕ್ರವಾರ ಕಾಡಾನೆಯೊಂದನ್ನು ಸೆರೆ ಹಿಡಿಯುವ ವೇಳೆ ಅದು 32 ಅಡಿ ಆಳದ ಹಳ್ಳಕ್ಕೆ ಬಿದ್ದು ಮೃತಪಟ್ಟಿದೆ. ಸುಮಾರು 20 ವರ್ಷ ವಯಸ್ಸಿನ ಗಂಡಾನೆ ಇದಾಗಿದ್ದು, ಸುತ್ತಮುತ್ತಲ ಪ್ರದೇಶದ ರೈತರ ಮೇಲೆ ದಾಳಿ ನಡೆಸುತ್ತಿತ್ತು. ವ್ಯಕ್ತಿಯೊಬ್ಬರು ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.
ಕಾಡಾನೆಯನ್ನು ಹಿಡಿಯಲು ಶುಕ್ರವಾರ ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭವಾಗಿತ್ತು.ಆನೆಯನ್ನು ಕಂಡ ಕೂಡಲೇ ಅರಿವಳಿಕೆ ಚುಚ್ಚು ಮದ್ದು ನೀಡಲಾಗಿತ್ತು. ಆದರೆ ಅರಿವಳಿಕೆ ಚುಚ್ಚಿಸಿಕೊಂಡ ಬಳಿಕ ಓಡಲು ಪ್ರಯತ್ನಿಸಿದ ಆನೆ ಸುಮಾರು 30 ಅಡಿ ಆಳದ ಸಿಮೆಂಟ್ ಅಂಗಳಕ್ಕೆ ಬಿದ್ದಿದೆ. ಈ ಕುರಿತು ಪ್ರತಿಕ್ರಿಯಿಸಿದ ಆನೆ ಕಾರ್ಯಪಡೆಯ ಡಿಸಿಎಫ್ ಪೂವಯ್ಯ, “” ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಆನೆಯು ಸ್ಥಳದಿಂದ ಓಡಿತು. ಸ್ವಲ್ಪ ದೂರ ಸಾಗಿದ ನಂತರ ಆಕಸ್ಮಿಕವಾಗಿ 32 ಅಡಿ ಆಳದ ಹಳ್ಳಕ್ಕೆ ಬಿದ್ದು, ತೀವ್ರವಾಗಿ ಗಾಯಗೊಂಡಿದೆ. ಬಿದ್ದ ರಭಸಕ್ಕೆ ಆನೆಯ ಒಳಾಂಗಗಳು ವಿಫಲಗೊಂಡು, ಸ್ಥಳದಲ್ಲೇ ಮೃತಪಟ್ಟಿತು. ಆನೆಯ ಬಲಗಣ್ಣಿನ ದೃಷ್ಟಿ ಕಡಿಮೆ ಇದ್ದ ಕಾರಣ ಗುಂಡಿ ಕಾಣಿಸಿರಲಿಲ್ಲ ಎನಿಸುತ್ತದೆ. ಸದ್ಯ, ಮೀನುಕೊಲ್ಲಿಯಲ್ಲಿ ಇದರ ಮರಣೋತ್ತರ ಪರೀಕ್ಷೆ ನಡೆಸಿ, ಅಂಗಾಂಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುವುದುʼʼ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಜೂನ್ ಒಂದರಂದು ವಿರಾಜಪೇಟೆ ತಾಲ್ಲೂಕಿನ ಮರಂದೋಡ ಗ್ರಾಮ ವ್ಯಾಪ್ತಿಯಲ್ಲಿ 35 ವರ್ಷ ಪ್ರಾಯದ ಹೆಣ್ಣಾನೆಯು ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟಿತ್ತು. ಪಳಗಿದ 5 ಆನೆಗಳ ಸಹಾಯದೊಂದಿಗೆ ಆನೆಯನ್ನು ʼಟ್ರಕ್’ಗೆ ಹತ್ತಿಸಲಾಗಿತ್ತು. ಆದರೆ, ಮಾರ್ಗದ ಮಧ್ಯೆಯೇ ಆನೆ ಹೃದಯಾಘಾತದಿಂದ ಮೃತಪಟ್ಟಿತ್ತು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…