ಮಡಿಕೇರಿ: ಕುಶಾಲನಗರ ತಾಲ್ಲೂಕಿನ ಅತ್ತೂರು ನಲ್ಲೂರು ಗ್ರಾಮದಲ್ಲಿ ಶುಕ್ರವಾರ ಕಾಡಾನೆಯೊಂದನ್ನು ಸೆರೆ ಹಿಡಿಯುವ ವೇಳೆ ಅದು 32 ಅಡಿ ಆಳದ ಹಳ್ಳಕ್ಕೆ ಬಿದ್ದು ಮೃತಪಟ್ಟಿದೆ. ಸುಮಾರು 20 ವರ್ಷ ವಯಸ್ಸಿನ ಗಂಡಾನೆ ಇದಾಗಿದ್ದು, ಸುತ್ತಮುತ್ತಲ ಪ್ರದೇಶದ ರೈತರ ಮೇಲೆ ದಾಳಿ ನಡೆಸುತ್ತಿತ್ತು. ವ್ಯಕ್ತಿಯೊಬ್ಬರು ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.
ಕಾಡಾನೆಯನ್ನು ಹಿಡಿಯಲು ಶುಕ್ರವಾರ ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭವಾಗಿತ್ತು.ಆನೆಯನ್ನು ಕಂಡ ಕೂಡಲೇ ಅರಿವಳಿಕೆ ಚುಚ್ಚು ಮದ್ದು ನೀಡಲಾಗಿತ್ತು. ಆದರೆ ಅರಿವಳಿಕೆ ಚುಚ್ಚಿಸಿಕೊಂಡ ಬಳಿಕ ಓಡಲು ಪ್ರಯತ್ನಿಸಿದ ಆನೆ ಸುಮಾರು 30 ಅಡಿ ಆಳದ ಸಿಮೆಂಟ್ ಅಂಗಳಕ್ಕೆ ಬಿದ್ದಿದೆ. ಈ ಕುರಿತು ಪ್ರತಿಕ್ರಿಯಿಸಿದ ಆನೆ ಕಾರ್ಯಪಡೆಯ ಡಿಸಿಎಫ್ ಪೂವಯ್ಯ, “” ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಆನೆಯು ಸ್ಥಳದಿಂದ ಓಡಿತು. ಸ್ವಲ್ಪ ದೂರ ಸಾಗಿದ ನಂತರ ಆಕಸ್ಮಿಕವಾಗಿ 32 ಅಡಿ ಆಳದ ಹಳ್ಳಕ್ಕೆ ಬಿದ್ದು, ತೀವ್ರವಾಗಿ ಗಾಯಗೊಂಡಿದೆ. ಬಿದ್ದ ರಭಸಕ್ಕೆ ಆನೆಯ ಒಳಾಂಗಗಳು ವಿಫಲಗೊಂಡು, ಸ್ಥಳದಲ್ಲೇ ಮೃತಪಟ್ಟಿತು. ಆನೆಯ ಬಲಗಣ್ಣಿನ ದೃಷ್ಟಿ ಕಡಿಮೆ ಇದ್ದ ಕಾರಣ ಗುಂಡಿ ಕಾಣಿಸಿರಲಿಲ್ಲ ಎನಿಸುತ್ತದೆ. ಸದ್ಯ, ಮೀನುಕೊಲ್ಲಿಯಲ್ಲಿ ಇದರ ಮರಣೋತ್ತರ ಪರೀಕ್ಷೆ ನಡೆಸಿ, ಅಂಗಾಂಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುವುದುʼʼ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಜೂನ್ ಒಂದರಂದು ವಿರಾಜಪೇಟೆ ತಾಲ್ಲೂಕಿನ ಮರಂದೋಡ ಗ್ರಾಮ ವ್ಯಾಪ್ತಿಯಲ್ಲಿ 35 ವರ್ಷ ಪ್ರಾಯದ ಹೆಣ್ಣಾನೆಯು ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟಿತ್ತು. ಪಳಗಿದ 5 ಆನೆಗಳ ಸಹಾಯದೊಂದಿಗೆ ಆನೆಯನ್ನು ʼಟ್ರಕ್’ಗೆ ಹತ್ತಿಸಲಾಗಿತ್ತು. ಆದರೆ, ಮಾರ್ಗದ ಮಧ್ಯೆಯೇ ಆನೆ ಹೃದಯಾಘಾತದಿಂದ ಮೃತಪಟ್ಟಿತ್ತು.
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…