ಜಿಲ್ಲೆಗಳು

ಕುಶಾಲನಗರ: ಸೆರೆ ಕಾರ್ಯಾಚರಣೆ ವೇಳೆ ಗುಂಡಿಗೆ ಬಿದ್ದು ಕಾಡಾನೆ ಸಾವು

ಮಡಿಕೇರಿ: ಕುಶಾಲನಗರ ತಾಲ್ಲೂಕಿನ ಅತ್ತೂರು ನಲ್ಲೂರು ಗ್ರಾಮದಲ್ಲಿ ಶುಕ್ರವಾರ ಕಾಡಾನೆಯೊಂದನ್ನು ಸೆರೆ ಹಿಡಿಯುವ ವೇಳೆ ಅದು 32 ಅಡಿ ಆಳದ ಹಳ್ಳಕ್ಕೆ ಬಿದ್ದು ಮೃತಪಟ್ಟಿದೆ. ಸುಮಾರು 20 ವರ್ಷ ವಯಸ್ಸಿನ ಗಂಡಾನೆ ಇದಾಗಿದ್ದು, ಸುತ್ತಮುತ್ತಲ ಪ್ರದೇಶದ ರೈತರ ಮೇಲೆ ದಾಳಿ ನಡೆಸುತ್ತಿತ್ತು. ವ್ಯಕ್ತಿಯೊಬ್ಬರು ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.


ಕಾಡಾನೆಯನ್ನು ಹಿಡಿಯಲು ಶುಕ್ರವಾರ ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭವಾಗಿತ್ತು.ಆನೆಯನ್ನು ಕಂಡ ಕೂಡಲೇ ಅರಿವಳಿಕೆ ಚುಚ್ಚು ಮದ್ದು ನೀಡಲಾಗಿತ್ತು. ಆದರೆ ಅರಿವಳಿಕೆ ಚುಚ್ಚಿಸಿಕೊಂಡ ಬಳಿಕ ಓಡಲು ಪ್ರಯತ್ನಿಸಿದ ಆನೆ ಸುಮಾರು 30 ಅಡಿ ಆಳದ ಸಿಮೆಂಟ್‌ ಅಂಗಳಕ್ಕೆ ಬಿದ್ದಿದೆ. ಈ ಕುರಿತು ಪ್ರತಿಕ್ರಿಯಿಸಿದ ಆನೆ ಕಾರ್ಯಪಡೆಯ ಡಿಸಿಎಫ್ ಪೂವಯ್ಯ, “” ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಆನೆಯು ಸ್ಥಳದಿಂದ ಓಡಿತು. ಸ್ವಲ್ಪ ದೂರ ಸಾಗಿದ ನಂತರ ಆಕಸ್ಮಿಕವಾಗಿ 32 ಅಡಿ ಆಳದ ಹಳ್ಳಕ್ಕೆ ಬಿದ್ದು, ತೀವ್ರವಾಗಿ ಗಾಯಗೊಂಡಿದೆ. ಬಿದ್ದ ರಭಸಕ್ಕೆ ಆನೆಯ ಒಳಾಂಗಗಳು ವಿಫಲಗೊಂಡು, ಸ್ಥಳದಲ್ಲೇ ಮೃತಪಟ್ಟಿತು. ಆನೆಯ ಬಲಗಣ್ಣಿನ ದೃಷ್ಟಿ ಕಡಿಮೆ ಇದ್ದ ಕಾರಣ ಗುಂಡಿ ಕಾಣಿಸಿರಲಿಲ್ಲ ಎನಿಸುತ್ತದೆ. ಸದ್ಯ, ಮೀನುಕೊಲ್ಲಿಯಲ್ಲಿ ಇದರ ಮರಣೋತ್ತರ ಪರೀಕ್ಷೆ ನಡೆಸಿ, ಅಂಗಾಂಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುವುದುʼʼ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಜೂನ್‌ ಒಂದರಂದು ವಿರಾಜಪೇಟೆ ತಾಲ್ಲೂಕಿನ ಮರಂದೋಡ ಗ್ರಾಮ ವ್ಯಾಪ್ತಿಯಲ್ಲಿ 35 ವರ್ಷ ಪ್ರಾಯದ ಹೆಣ್ಣಾನೆಯು ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟಿತ್ತು. ಪಳಗಿದ 5 ಆನೆಗಳ ಸಹಾಯದೊಂದಿಗೆ ಆನೆಯನ್ನು ʼಟ್ರಕ್’ಗೆ ಹತ್ತಿಸಲಾಗಿತ್ತು. ಆದರೆ, ಮಾರ್ಗದ ಮಧ್ಯೆಯೇ ಆನೆ ಹೃದಯಾಘಾತದಿಂದ ಮೃತಪಟ್ಟಿತ್ತು.

andolanait

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

1 hour ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

10 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 hours ago