ಮೈಸೂರು: ಫೆ.8ರಂದು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾ ಉತ್ಸವ ‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನಲ್ಲಿ ಮೈಸೂರಿನ ವರ್ಷ(13 ವರ್ಷ) ಮತ್ತು ನಮ್ರತಾ (9 ವರ್ಷ) ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು ಕಳರಿ ಸಾಧನ ಮುಖ್ಯಸ್ಥ ವರುಣ್ ಯಾದವ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಇಬ್ಬರು ಹೆಣ್ಣುಮಕ್ಕಳು ಕಳರಿ ಪಯಟ್ಟು ವಿಭಾಗದಲ್ಲಿ ಮೈಸೂರಿನಿಂದ ಪ್ರತಿನಿಧಿಸುತ್ತಿರುವ ಮೊದಲ ಕ್ರೀಡಾಪಟುಗಳಾಗಿದ್ದಾರೆ. ಕರ್ನಾಟಕದಿಂದ 18 ಮಂದಿ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದು, 16 ಮಂದಿ ಬೆಂಗಳೂರು ಮೂಲದವರು ಮತ್ತು ಇಬ್ಬರು ಮೈಸೂರಿನ ಕುವರಿಯರು ಎಂದು ವಿವರಿಸಿದರು. ಈ ಸ್ಪರ್ಧೆಯು ಸಬ್ ಜೂನಿಯರ್ ಗರ್ಲ್ಸ್ ಮತ್ತು ಜೂನಿಯರ್ ಗರ್ಲ್ಸ್ ವಿಭಾಗದಲ್ಲಿ ನಡೆಯುತ್ತದೆ. ಪರಸ್ಪರ ಕಾದಾಟ ಇರುವುದಿಲ್ಲ, ಕಲೆಯ ಪ್ರದರ್ಶನವಿರುತ್ತದೆ ಎಂದು ತಿಳಿಸಿದರು.
ಕಳರಿ ಪಟುಗಳಾದ ವರ್ಷ ಮತ್ತು ನಮ್ರತಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…