ಜಿಲ್ಲೆಗಳು

ಸಾತನೂರು ದೇವರಾಜುಗೆ ಕುವೆಂಪು ಗೌರವ ಪುರಸ್ಕಾರ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ವಕೋಶ ಯೋಜನೆಯ ಗೌರವ ವಿಜ್ಞಾನ ಸಂಪಾದಕ, ವಿಜ್ಞಾನ ಲೇಖಕ ಹಾಗೂ ವಿಶ್ರಾಂತ ಪ್ರಾಂಶುಪಾಲ ಸಾತನೂರು ದೇವರಾಜು ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ -ವೀರ ಕನ್ನಡಿಗರ ಘರ್ಜನೆ ಮಂಡ್ಯ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ‘ಕುವೆಂಪು ಗೌರವ ಪುರಸ್ಕಾರ’ ದೊರೆತಿದೆ.
ಮೂರು ದಶಕಗಳಿಂದ ಬರೆವಣಿಗೆಯ ಕೃಷಿಯಲ್ಲಿ ತೊಡಗಿರುವ ಸಾತನೂರು ದೇವರಾಜ್ ಅವರ ಸೇವಾ ಸಾಧನೆಯನ್ನು ಪರಿಗಣಿಸಿ ಸಾಹಿತಿ ಟಿ.ಸತೀಶ್ ಜವರೇಗೌಡ ಅವರ ನೇತೃತ್ವದ ಸಮಿತಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಜ.8ರಂದು ಬೆಳಿಗ್ಗೆ 10.30ಕ್ಕೆ ಮಂಡ್ಯ ನಗರದ ಹರ್ಡೀಕರ್ ಭವನದಲ್ಲಿ ನಡೆಯಲಿರುವ ‘ವಿಶ್ವಮಾನವ ಕುವೆಂಪು ಹಬ್ಬ’ದಲ್ಲಿ ಕುವೆಂಪು ಗೌರವ ಪುರಸ್ಕಾರ ನೀಡಲಾಗುವುದು. ವಿದ್ವಾಂಸರಾದ ಡಾ. ಸಿಪಿಕೆ, ಮಂಡ್ಯ ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ.ಸತೀಶ್ ಜವರೇಗೌಡ ಪಾಲ್ಗೊಳ್ಳುವರು.

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

31 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

4 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

6 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

6 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

6 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

6 hours ago