ಜಿಲ್ಲೆಗಳು

ಕೆವಿಎನ್ ದೊಡ್ಡಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ, ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದಲ್ಲಿ ದನಗಾಹಿಯ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಚಿರತೆ ಗ್ರಾಮದಲ್ಲಿ ಪುನಃ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.

ಕಾವೇರಿ ವನ್ಯಧಾಮದ ಕೆವಿಎನ್ ದೊಡ್ಡಿ ಗ್ರಾಮದಲ್ಲಿ ಚಿರತೆ ಸೆರೆಹಿಡಿಯಲು ಇಟ್ಟಿರುವ ಬೋನು

ಜಾನುವಾರು ಮೇಯಿಸಲು ಹೋಗಿದ್ದ ಕೆವಿಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಎಂಬುವವರ ಮೇಲೆ ಚಿರತೆ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಗೋವಿಂದಯ್ಯ ಸ್ಥಳದಲ್ಲೇ ಮೃತಪಟ್ಟಿದ್ದರು. ದನಗಾಹಿಯ ಮೇಲೆ ದಾಳಿ ಮಾಡಿರುವ ಚಿರತೆಯನ್ನು ಹಿಡಿದು ಬೇರೆಡೆ ಬಿಡುವಂತೆ ಗ್ರಾಮಸ್ಥರಿಂದ ವ್ಯಾಪಕ ಒತ್ತಾಯ ಕೇಳಿ ಬಂದಿತ್ತು.

ಬಳಿಕ ಶಾಸಕ ಆರ್. ನರೇಂದ್ರ ಹಾಗೂ ಅರಣ್ಯಾಧಿಕಾರಿಗಳು ಮೃತರ ಮನೆಗೆ ತೆರಳಿ ಸಾಂತ್ವನ ಹೇಳುವುದರ ಜತೆಗೆ ಚಿರತೆ ಹಿಡಿಯಲು ಕಾರ್ಯಚರಣೆ ಆರಂಭಿಸಲಾಗಿದ್ದು, ಗ್ರಾಮಸ್ಥರು ಸಹ ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು. ಮರುದಿನವೇ ಕಾರ್ಯಚರಣೆ ಆರಂಭಿಸಿ ಅರಣ್ಯ ಇಲಾಖೆ ಚಿರತೆ ದಾಳಿ ಮಾಡಿದ್ದ ಪ್ರದೇಶ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಕ್ಯಾಮರಾ ಹಾಗೂ ಬೋನ್ ಗಳನ್ನು ಅಳವಡಿಸಿ ಚಿರತೆ ಚಲನವಲನಗಳನ್ನು ಪರಿಶೀಲನೆ ನಡೆಸುತ್ತಿದೆ. ಹೀಗಿದ್ದರೂ ಬುಧವಾರ ಮತ್ತೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರು ಮತ್ತಷ್ಟು ಭಯಭೀತರನ್ನಾಗುವಂತೆ ಮಾಡಿದೆ. ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದಾಗಿ ಗ್ರಾಮಸ್ಥರು ಹೇಳುತ್ತಿದ್ದಾರೆ. ಇದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕಾರ್ಯಾಚರಣೆ  ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಎಸಿಎಫ್ ಎಂ.ಎನ್ ಅಂಕರಾಜು ತಿಳಿಸಿದರು.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

39 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

49 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

56 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago