ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದಲ್ಲಿ ದನಗಾಹಿಯ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಚಿರತೆ ಗ್ರಾಮದಲ್ಲಿ ಪುನಃ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.
ಜಾನುವಾರು ಮೇಯಿಸಲು ಹೋಗಿದ್ದ ಕೆವಿಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಎಂಬುವವರ ಮೇಲೆ ಚಿರತೆ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಗೋವಿಂದಯ್ಯ ಸ್ಥಳದಲ್ಲೇ ಮೃತಪಟ್ಟಿದ್ದರು. ದನಗಾಹಿಯ ಮೇಲೆ ದಾಳಿ ಮಾಡಿರುವ ಚಿರತೆಯನ್ನು ಹಿಡಿದು ಬೇರೆಡೆ ಬಿಡುವಂತೆ ಗ್ರಾಮಸ್ಥರಿಂದ ವ್ಯಾಪಕ ಒತ್ತಾಯ ಕೇಳಿ ಬಂದಿತ್ತು.
ಬಳಿಕ ಶಾಸಕ ಆರ್. ನರೇಂದ್ರ ಹಾಗೂ ಅರಣ್ಯಾಧಿಕಾರಿಗಳು ಮೃತರ ಮನೆಗೆ ತೆರಳಿ ಸಾಂತ್ವನ ಹೇಳುವುದರ ಜತೆಗೆ ಚಿರತೆ ಹಿಡಿಯಲು ಕಾರ್ಯಚರಣೆ ಆರಂಭಿಸಲಾಗಿದ್ದು, ಗ್ರಾಮಸ್ಥರು ಸಹ ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು. ಮರುದಿನವೇ ಕಾರ್ಯಚರಣೆ ಆರಂಭಿಸಿ ಅರಣ್ಯ ಇಲಾಖೆ ಚಿರತೆ ದಾಳಿ ಮಾಡಿದ್ದ ಪ್ರದೇಶ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಕ್ಯಾಮರಾ ಹಾಗೂ ಬೋನ್ ಗಳನ್ನು ಅಳವಡಿಸಿ ಚಿರತೆ ಚಲನವಲನಗಳನ್ನು ಪರಿಶೀಲನೆ ನಡೆಸುತ್ತಿದೆ. ಹೀಗಿದ್ದರೂ ಬುಧವಾರ ಮತ್ತೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರು ಮತ್ತಷ್ಟು ಭಯಭೀತರನ್ನಾಗುವಂತೆ ಮಾಡಿದೆ. ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದಾಗಿ ಗ್ರಾಮಸ್ಥರು ಹೇಳುತ್ತಿದ್ದಾರೆ. ಇದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಎಸಿಎಫ್ ಎಂ.ಎನ್ ಅಂಕರಾಜು ತಿಳಿಸಿದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…