ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದಲ್ಲಿ ದನಗಾಹಿಯ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಚಿರತೆ ಗ್ರಾಮದಲ್ಲಿ ಪುನಃ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.
ಜಾನುವಾರು ಮೇಯಿಸಲು ಹೋಗಿದ್ದ ಕೆವಿಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಎಂಬುವವರ ಮೇಲೆ ಚಿರತೆ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಗೋವಿಂದಯ್ಯ ಸ್ಥಳದಲ್ಲೇ ಮೃತಪಟ್ಟಿದ್ದರು. ದನಗಾಹಿಯ ಮೇಲೆ ದಾಳಿ ಮಾಡಿರುವ ಚಿರತೆಯನ್ನು ಹಿಡಿದು ಬೇರೆಡೆ ಬಿಡುವಂತೆ ಗ್ರಾಮಸ್ಥರಿಂದ ವ್ಯಾಪಕ ಒತ್ತಾಯ ಕೇಳಿ ಬಂದಿತ್ತು.
ಬಳಿಕ ಶಾಸಕ ಆರ್. ನರೇಂದ್ರ ಹಾಗೂ ಅರಣ್ಯಾಧಿಕಾರಿಗಳು ಮೃತರ ಮನೆಗೆ ತೆರಳಿ ಸಾಂತ್ವನ ಹೇಳುವುದರ ಜತೆಗೆ ಚಿರತೆ ಹಿಡಿಯಲು ಕಾರ್ಯಚರಣೆ ಆರಂಭಿಸಲಾಗಿದ್ದು, ಗ್ರಾಮಸ್ಥರು ಸಹ ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು. ಮರುದಿನವೇ ಕಾರ್ಯಚರಣೆ ಆರಂಭಿಸಿ ಅರಣ್ಯ ಇಲಾಖೆ ಚಿರತೆ ದಾಳಿ ಮಾಡಿದ್ದ ಪ್ರದೇಶ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಕ್ಯಾಮರಾ ಹಾಗೂ ಬೋನ್ ಗಳನ್ನು ಅಳವಡಿಸಿ ಚಿರತೆ ಚಲನವಲನಗಳನ್ನು ಪರಿಶೀಲನೆ ನಡೆಸುತ್ತಿದೆ. ಹೀಗಿದ್ದರೂ ಬುಧವಾರ ಮತ್ತೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರು ಮತ್ತಷ್ಟು ಭಯಭೀತರನ್ನಾಗುವಂತೆ ಮಾಡಿದೆ. ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದಾಗಿ ಗ್ರಾಮಸ್ಥರು ಹೇಳುತ್ತಿದ್ದಾರೆ. ಇದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಎಸಿಎಫ್ ಎಂ.ಎನ್ ಅಂಕರಾಜು ತಿಳಿಸಿದರು.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…