ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ.
ಇನ್ನು ಈ ಪ್ರದೇಶದಲ್ಲಿ ಈಗಾಗಲೇ ಅನೇಕ ಅಮಾಯಕರು ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಜೀವ ಕಳೆದುಕೊಂಡಿದ್ದು ಅರಣ್ಯ ಇಲಾಖೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದರು. ಶವ ಇಟ್ಟು ಪ್ರತಿಭಟನೆ ನಡೆಸಿದ ಮೃತನ ಕುಟುಂಬಸ್ಥರು ಹಾಗೂ ಸ್ಥಳೀಯರು ಕೂಡಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಆಗಮಿಸಬೇಕು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಸ್ಥಳದಲ್ಲಿ ಸುಮಾರು 500ಕ್ಕೂ ಹೆಚ್ಚು ಜನರು ಜಮಾಯಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್, ಜಿಲ್ಲಾಧಿಕಾರಿ ಸಿ ಸತ್ಯಭಾಮ, ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಹಾಗೂ ಹಲವು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾನಿರತರ ಮನವೊಲಿಸುವ ಯತ್ನ ನಡೆಸಿದರು. ಇದಕ್ಕೆ ಬಗ್ಗದ ಪ್ರತಿಭಟನಾಕಾರರು ಅರಣ್ಯ ಸಚಿವರು ಹಾಗೂ ಇಲಾಖೆಯ ಮೇಲಾಧಿಕಾರಿಗಳು ಆಗಮಿಸಲೇಬೇಕು, ಅಲ್ಲಿಯವರೆಗೂ ಮೃತದೇಹ ಎತ್ತುವುದಿಲ್ಲ ಎಂದು ಪ್ರತಿಭಟನೆ ಮುಂದುವರಿಸಿದ್ದಾರೆ.
ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…
ರೋಮ್: ಇಟಲಿ ಕರಾವಳಿಯಲ್ಲಿ ಭೀಕರ ಬೋಟ್ ದುರಂತ ಸಂಭವಿಸಿದ್ದು, ಮೆಡಿಟೇರಿಯನ್ ಸಮುದ್ರದಲ್ಲಿ ಬೋಟ್ ಮುಳುಗಿ 71 ಜನರು ನಾಪತ್ತೆಯಾಗಿದ್ದಾರೆ. ಈಸ್ಟರ್…
ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್ ಮೇಲೆ ಇಸ್ರೇಲ್…
ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಸಿಎಂ…
ಟೆಹರಾನ್: ನಷ್ಟ ಪರಿಹಾರವಿಲ್ಲದೇ ಹಾರ್ಮುಜ್ ಜಲಸಂಧಿ ಓಪನ್ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಇರಾನ್ ಕೌಂಟರ್ ಕೊಟ್ಟಿದೆ.…
ನವದೆಹಲಿ: ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್ಪಿಜಿ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಅಭಯ…