ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ.
ಇನ್ನು ಈ ಪ್ರದೇಶದಲ್ಲಿ ಈಗಾಗಲೇ ಅನೇಕ ಅಮಾಯಕರು ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಜೀವ ಕಳೆದುಕೊಂಡಿದ್ದು ಅರಣ್ಯ ಇಲಾಖೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದರು. ಶವ ಇಟ್ಟು ಪ್ರತಿಭಟನೆ ನಡೆಸಿದ ಮೃತನ ಕುಟುಂಬಸ್ಥರು ಹಾಗೂ ಸ್ಥಳೀಯರು ಕೂಡಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಆಗಮಿಸಬೇಕು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಸ್ಥಳದಲ್ಲಿ ಸುಮಾರು 500ಕ್ಕೂ ಹೆಚ್ಚು ಜನರು ಜಮಾಯಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್, ಜಿಲ್ಲಾಧಿಕಾರಿ ಸಿ ಸತ್ಯಭಾಮ, ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಹಾಗೂ ಹಲವು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾನಿರತರ ಮನವೊಲಿಸುವ ಯತ್ನ ನಡೆಸಿದರು. ಇದಕ್ಕೆ ಬಗ್ಗದ ಪ್ರತಿಭಟನಾಕಾರರು ಅರಣ್ಯ ಸಚಿವರು ಹಾಗೂ ಇಲಾಖೆಯ ಮೇಲಾಧಿಕಾರಿಗಳು ಆಗಮಿಸಲೇಬೇಕು, ಅಲ್ಲಿಯವರೆಗೂ ಮೃತದೇಹ ಎತ್ತುವುದಿಲ್ಲ ಎಂದು ಪ್ರತಿಭಟನೆ ಮುಂದುವರಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…