ಕೊಳ್ಳೇಗಾಲ: ಗೃಹಿಣಿಯೊಬ್ಬರು ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಮೊಬೈಲ್ ಮತ್ತು ಪರ್ಸ್ ಅನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಇಲ್ಲಿನ ಅನುಪಮ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಯೋಗಚಂದ್ರ ಅವರ ಪತ್ನಿ ಶೋಭ ಅವರು ಮೊಬೈಲ್, ಪರ್ಸ್ ಕಳೆದುಕೊಂಡವರು.
ಜನನಿ ಆಸ್ಪತ್ರೆಯ ಬಳಿ ಫೋನ್ನಲ್ಲಿ ಮಾತನಾಡಿಕೊಂಡು ಹೋಗುವಾಗ ಇಬ್ಬರು ಬೈಕ್ ಸವಾರರು ಹಿಂದಿನಿಂದ ಬಂದು ಮೊಬೈಲ್ ಹಾಗೂ ಪರ್ಸನ್ನು ಎಗರಿಸಿಕೊಂಡು ಪರಾರಿಯಾಗಿದ್ದಾರೆ.
ತಕ್ಷಣ ಇವರು ಪೊಲೀಸ್ ಠಾಣೆಗೆ ಬಂದು ಈ ಸಂಬಂಧ ದೂರು ಸಲ್ಲಿಸಿದಾಗ ಪೊಲೀಸರು ತಕ್ಷಣ ಅಲ್ಲಿದ್ದ ಸಿಸಿ ಟಿವಿ ಮಾಹಿತಿ ಸಂಗ್ರಹಿಸಿ ಕಳ್ಳರ ಮಾಹಿತಿಗಳನ್ನು ಪಡೆದು, ಆರೋಪಪಿ ಗುರುಪ್ರಸಾದ್ ಅಲಿಯಾಸ್ ಕೂಳೆ ಎಂಬಾತನನ್ನು ಬಂಧಿಸಿ ಈತನಿಂದ ಎಗರಿಸಿದ್ದ ಮೊಬೈಲ್ ಹಾಗೂ ಪರ್ಸನ್ನು ಹಾಗೂ ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.
ಮತ್ತೊಬ್ಬ ಆರೋಪಿ ಗುರು ಅಲಿಯಾಸ್ ಡಾಲಿ ತಲೆ ಮರೆಸಿಕೊಂಡಿದ್ದಾನೆ. ಗುರುಪ್ರಸಾದ್ಗೆ ನ್ಯಾಯಾಧೀಶರು ೧೫ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಪರಾಧ ವಿಭಾಗದ ಎಸ್ಐ ಉಮಾವತಿ ತನಿಖೆ ನಡೆಸುತ್ತಿದ್ದಾರೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…