ಜಿಲ್ಲೆಗಳು

ಗೃಹಿಣಿ ಬಳಿ ಇದ್ದ ಮೊಬೈಲ್, ಪರ್ಸ್ ದೋಚಿದ ದುಷ್ಕರ್ಮಿಗಳು

ಕೊಳ್ಳೇಗಾಲ: ಗೃಹಿಣಿಯೊಬ್ಬರು ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಮೊಬೈಲ್ ಮತ್ತು ಪರ್ಸ್ ಅನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಇಲ್ಲಿನ ಅನುಪಮ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಯೋಗಚಂದ್ರ ಅವರ ಪತ್ನಿ ಶೋಭ ಅವರು ಮೊಬೈಲ್, ಪರ್ಸ್ ಕಳೆದುಕೊಂಡವರು.

ಜನನಿ ಆಸ್ಪತ್ರೆಯ ಬಳಿ ಫೋನ್‌ನಲ್ಲಿ ಮಾತನಾಡಿಕೊಂಡು ಹೋಗುವಾಗ ಇಬ್ಬರು ಬೈಕ್ ಸವಾರರು ಹಿಂದಿನಿಂದ ಬಂದು ಮೊಬೈಲ್ ಹಾಗೂ ಪರ್ಸನ್ನು ಎಗರಿಸಿಕೊಂಡು ಪರಾರಿಯಾಗಿದ್ದಾರೆ.
ತಕ್ಷಣ ಇವರು ಪೊಲೀಸ್ ಠಾಣೆಗೆ ಬಂದು ಈ ಸಂಬಂಧ ದೂರು ಸಲ್ಲಿಸಿದಾಗ ಪೊಲೀಸರು ತಕ್ಷಣ ಅಲ್ಲಿದ್ದ ಸಿಸಿ ಟಿವಿ ಮಾಹಿತಿ ಸಂಗ್ರಹಿಸಿ ಕಳ್ಳರ ಮಾಹಿತಿಗಳನ್ನು ಪಡೆದು, ಆರೋಪಪಿ ಗುರುಪ್ರಸಾದ್ ಅಲಿಯಾಸ್ ಕೂಳೆ ಎಂಬಾತನನ್ನು ಬಂಧಿಸಿ ಈತನಿಂದ ಎಗರಿಸಿದ್ದ ಮೊಬೈಲ್ ಹಾಗೂ ಪರ್ಸನ್ನು ಹಾಗೂ ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.

ಮತ್ತೊಬ್ಬ ಆರೋಪಿ ಗುರು ಅಲಿಯಾಸ್ ಡಾಲಿ ತಲೆ ಮರೆಸಿಕೊಂಡಿದ್ದಾನೆ. ಗುರುಪ್ರಸಾದ್‌ಗೆ ನ್ಯಾಯಾಧೀಶರು ೧೫ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಪರಾಧ ವಿಭಾಗದ ಎಸ್‌ಐ ಉಮಾವತಿ ತನಿಖೆ ನಡೆಸುತ್ತಿದ್ದಾರೆ.

andolanait

Recent Posts

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

48 mins ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

2 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

3 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

3 hours ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

4 hours ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

4 hours ago