ಜಿಲ್ಲೆಗಳು

ಗೃಹಿಣಿ ಬಳಿ ಇದ್ದ ಮೊಬೈಲ್, ಪರ್ಸ್ ದೋಚಿದ ದುಷ್ಕರ್ಮಿಗಳು

ಕೊಳ್ಳೇಗಾಲ: ಗೃಹಿಣಿಯೊಬ್ಬರು ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಮೊಬೈಲ್ ಮತ್ತು ಪರ್ಸ್ ಅನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಇಲ್ಲಿನ ಅನುಪಮ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಯೋಗಚಂದ್ರ ಅವರ ಪತ್ನಿ ಶೋಭ ಅವರು ಮೊಬೈಲ್, ಪರ್ಸ್ ಕಳೆದುಕೊಂಡವರು.

ಜನನಿ ಆಸ್ಪತ್ರೆಯ ಬಳಿ ಫೋನ್‌ನಲ್ಲಿ ಮಾತನಾಡಿಕೊಂಡು ಹೋಗುವಾಗ ಇಬ್ಬರು ಬೈಕ್ ಸವಾರರು ಹಿಂದಿನಿಂದ ಬಂದು ಮೊಬೈಲ್ ಹಾಗೂ ಪರ್ಸನ್ನು ಎಗರಿಸಿಕೊಂಡು ಪರಾರಿಯಾಗಿದ್ದಾರೆ.
ತಕ್ಷಣ ಇವರು ಪೊಲೀಸ್ ಠಾಣೆಗೆ ಬಂದು ಈ ಸಂಬಂಧ ದೂರು ಸಲ್ಲಿಸಿದಾಗ ಪೊಲೀಸರು ತಕ್ಷಣ ಅಲ್ಲಿದ್ದ ಸಿಸಿ ಟಿವಿ ಮಾಹಿತಿ ಸಂಗ್ರಹಿಸಿ ಕಳ್ಳರ ಮಾಹಿತಿಗಳನ್ನು ಪಡೆದು, ಆರೋಪಪಿ ಗುರುಪ್ರಸಾದ್ ಅಲಿಯಾಸ್ ಕೂಳೆ ಎಂಬಾತನನ್ನು ಬಂಧಿಸಿ ಈತನಿಂದ ಎಗರಿಸಿದ್ದ ಮೊಬೈಲ್ ಹಾಗೂ ಪರ್ಸನ್ನು ಹಾಗೂ ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.

ಮತ್ತೊಬ್ಬ ಆರೋಪಿ ಗುರು ಅಲಿಯಾಸ್ ಡಾಲಿ ತಲೆ ಮರೆಸಿಕೊಂಡಿದ್ದಾನೆ. ಗುರುಪ್ರಸಾದ್‌ಗೆ ನ್ಯಾಯಾಧೀಶರು ೧೫ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಪರಾಧ ವಿಭಾಗದ ಎಸ್‌ಐ ಉಮಾವತಿ ತನಿಖೆ ನಡೆಸುತ್ತಿದ್ದಾರೆ.

andolanait

Recent Posts

ಮಳೆ ಕೊರತೆ ನಡುವೆಯೂ ತರಕಾರಿ ಅಗ್ಗ

ದಿನೇಶ್ ಕುಮಾರ್ ಎಚ್.ಎಸ್. ಮೈಸೂರು: ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಡುವೆಯೂ ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಪಾತಾಳಕ್ಕಿಳಿದಿದೆ. ಕಳೆದ…

4 mins ago

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago