Mysore
21
scattered clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಜ.14ರಂದು ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ

ಮೈಸೂರು: ಚಾಮುಂಡಿಬೆಟ್ಟದ ಪಾದದಲ್ಲಿರುವ ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಪೂಜಾ ಸಮಿತಿ ವತಿಯಿಂದ ಜ.14ರಂದು ಸಂಜೆ 6.30ಕ್ಕೆ ಶಬರಿಮಲೆಯಲ್ಲಿ ಜ್ಯೋತಿ ಕಾಣುವ ಸಮಯದಲ್ಲಿ ಲಕ್ಷ ದೀಪೋತ್ಸವ ಆಯೋಜಿಸಲಾಗಿದೆ ಎಂದು ಸಮಿತಿಯ ಜಂಟಿ ಕಾರ್ಯದರ್ಶಿ ಕೆ.ಎಂ.ಬಸವಾರಾಧ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆಯ ಸ್ವಾಮಿ ಶಿವಕಂಠಾನಂದ ಅವರು ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್, ಮುಡಾ ಅಧ್ಯಕ್ಷ ಯಶಸ್ವಿ ಸೋಮಶೇಖರ್, ಪುಟ್ಟಲಿಂಗಮ್ಮ ಇನ್ನಿತರರು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಸಂಜೆ 5 ಗಂಟೆಗೆ ರಘು ಮತ್ತು ತಂಡದವರಿಂದ ಅಯ್ಯಪ್ಪಸ್ವಾಮಿ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಕಾರ್ಯದರ್ಶಿ ಆರ್.ಹರಿದಾಸ್, ಖಜಾಂಚಿ ಸುರೇಂದ್ರನ್, ಸದಸ್ಯ ಬಿ.ಎಲ್. ಶಂಕರ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!