ಮೈಸೂರು: ಚಾಮುಂಡಿಬೆಟ್ಟದ ಪಾದದಲ್ಲಿರುವ ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಪೂಜಾ ಸಮಿತಿ ವತಿಯಿಂದ ಜ.14ರಂದು ಸಂಜೆ 6.30ಕ್ಕೆ ಶಬರಿಮಲೆಯಲ್ಲಿ ಜ್ಯೋತಿ ಕಾಣುವ ಸಮಯದಲ್ಲಿ ಲಕ್ಷ ದೀಪೋತ್ಸವ ಆಯೋಜಿಸಲಾಗಿದೆ ಎಂದು ಸಮಿತಿಯ ಜಂಟಿ ಕಾರ್ಯದರ್ಶಿ ಕೆ.ಎಂ.ಬಸವಾರಾಧ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆಯ ಸ್ವಾಮಿ ಶಿವಕಂಠಾನಂದ ಅವರು ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್, ಮುಡಾ ಅಧ್ಯಕ್ಷ ಯಶಸ್ವಿ ಸೋಮಶೇಖರ್, ಪುಟ್ಟಲಿಂಗಮ್ಮ ಇನ್ನಿತರರು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಸಂಜೆ 5 ಗಂಟೆಗೆ ರಘು ಮತ್ತು ತಂಡದವರಿಂದ ಅಯ್ಯಪ್ಪಸ್ವಾಮಿ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಕಾರ್ಯದರ್ಶಿ ಆರ್.ಹರಿದಾಸ್, ಖಜಾಂಚಿ ಸುರೇಂದ್ರನ್, ಸದಸ್ಯ ಬಿ.ಎಲ್. ಶಂಕರ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…