ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಂದ ನಾಮಕರಣ
ಮೈಸೂರು: ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಹೆಣ್ಣಾನೆ ಲಕ್ಷ್ಮೀಗೆ ಜನಿಸಿದ್ದ ಗಂಡು ಆನೆಗೆ ಶ್ರೀದತ್ತಾತ್ರೇಯ ಹೆಸರನ್ನು ನಾಮಕರಣ ಮಾಡಲಾಗಿದೆ.
ಮಂಗಳವಾರ ರಾತ್ರಿ ದಿಢೀರನೇ ಲಕ್ಷ್ಮೀ ಆನೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದ ಅಧಿಕಾರಿಗಳು ತಕ್ಷಣವೇ ಅರಮನೆ ಆನೆ ಲಾಯಕ್ಕೆ ಕರೆತರುವ ಕೆಲಸ ಮಾಡಿತ್ತು. ನಂತರ ಸಂಜೆ 7 ಗಂಟೆಯ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಬುಧವಾರ ಲಕ್ಷ್ಮೀ ಮತ್ತು ಪುತ್ರ ಗಂಡು ಆನೆಯ ಆರೋಗ್ಯವನ್ನು ವಿಚಾರಿಸಲು ಆಗಮಿಸಿದ್ದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಒಂದು ಒಳ್ಳೆಯ ಹೆಸರನ್ನು ಇಡುವಂತೆ ಡಿಸಿಎಫ್ ಡಾ.ವಿ.ಕರಿಕಾಳನ್ ಕೋರಿಕೊಂಡಿದ್ದರು.
ಇದಲ್ಲದೆ,ನಗರಪಾಲಿಕೆ ಸದಸ್ಯ ಲೋಕೇಶ್ ಅವರು ಶ್ರೀಕಂಠದತ್ತ ಎಂಬಹೆಸರನ್ನು ಇಡುವಂತೆ ಮನವಿ ಸಲ್ಲಿಸಿದ್ದರು. ಇದೀಗ ಪ್ರಮೋದಾದೇವಿ ಅವರು ಸೂಚಿಸಿದ್ದ ಶ್ರೀದತ್ತಾತ್ತೇಯ ಎನ್ನುವ ಹೆಸರನ್ನು ನಾಮಕರಣ ಮಾಡಲಾಗಿದೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…