ಜಿಲ್ಲೆಗಳು

ಲಲಿತಾ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನ ಆಚರಣೆ

ಮೈಸೂರು: ನಗರದ ಯಾದವಗಿರಿಯಲ್ಲಿರುವ ಲಲಿತಾ ಪ್ರೌಢಶಾಲೆಯಲ್ಲಿ ಇಂದು 2022-23 ವರ್ಷದ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ನಡೆಸಲಾಯಿತು.

ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಮೈಸೂರು ವಿಭಾಗದ ಅಧ್ಯಕ್ಷೆಯಾದ ಶ್ರೀಮತಿ ಪೂಜಾ ಅಗರ್ವಾಲ್ ರವರು ಮುಖ್ಯ ಅತಿಥಿಯಾಗಿದ್ದರು. ಅವರು ವೈಯಕ್ತಿಕ ಹಾಗೂ ತಂಡದ ಸ್ಪರ್ಧೆಗಳಲ್ಲಿ ಭಾಗವಹಿಸಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಭಾರತೀಯ ರೈಲ್ವೆಯ ಸಿಬ್ಬಂದಿಯಾಗಿ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಆಟಗಾರ್ತಿ ಹಾಗೂ ಪ್ರಸ್ತುತ ಭಾರತೀಯ ಮಹಿಳಾ ಬಾಸ್ಕೆಟ್‌ಬಾಲ್ ತಂಡದ ನಾಯಕಿಯಾದ ಎಂ.ಎಸ್.ಭಾಂದವ್ಯ ರವರನ್ನು ಸನ್ಮಾನಿಸಲಾಯಿತು.

ಶ್ರೀಮತಿ ಅಗರ್ವಾಲ್ ರವರು ವಿಜೇತರನ್ನು ಅಭಿನಂದಿಸುತ್ತಾ, ಪದಕ ಗೆದ್ದಿದ್ದರೂ, ಗೆಲ್ಲದಿದ್ದರೂ, ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರೂ ವಿಜೇತರು ಎಂದು ನಾನು ದೃಢವಾಗಿ ನಂಬಿದ್ದೇನೆ ಎಂದು ಹೇಳಿದರು. ಅಂತ್ಯದಲ್ಲಿ ಕ್ರೀಡೆಯು ಫಿಟ್ನೆಸ್, ಆರೋಗ್ಯ ಮತ್ತು ಸಂತೋಷದ ವಿಷಯದಲ್ಲಿ ದೊಡ್ಡ ವ್ಯತ್ಯಾಸ ತರುತ್ತದೆ. ಭಾಗವಹಿಸುವವರ ನಡುವೆ ಸಾಮಾಜಿಕ ಸಂಬಂಧಗಳನ್ನು ಬೆಳೆಸಲು ಕ್ರೀಡೆಗಳು ಸಹಾಯ ಮಾಡಿ ಸಮಾಜದಲ್ಲಿನ ಅವರ ಪಾತ್ರದ ಬಗ್ಗೆ ಹೆಚ್ಚಿನ ತಿಳುವಳಿಕೆಯನ್ನು ನೀಡುತ್ತದೆ ಎಂದು ಅವರು ಹೇಳಿದರು. ಅಂತಿಮವಾಗಿ, ಸುತ್ತಮುತ್ತಲೂ ಹರ್ಷವನ್ನು ತರಲು ಮತ್ತು ಸಮುದಾಯಕ್ಕೆ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸಲು ಇದು ವ್ಯಕ್ತಿಯನ್ನು ರೂಪಿಸುತ್ತದೆ ಎಂದು ಅವರು ತಿಳಿಸಿದರು.

ಶ್ರೀಮತಿ ಭಾಂದವ್ಯ ರವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ಮತ್ತು ಒತ್ತಡವು ಶಿಕ್ಷಣದ ಕಡೆಗೆ ಹೆಚ್ಚಾಗಿದ್ದು, ಆಟವಾಡುವುದು ಅಥವಾ ಕ್ರೀಡೆಗಳಲ್ಲಿ ಭಾಗವಹಿಸುವುದು ಕೇವಲ ಹವ್ಯಾಸವಾಗಿ ಮಾರ್ಪಟ್ಟಿದೆ ಎಂದು ವಿಷಾದಿಸಿದರು. ಅವರು ಯುವಜನರಿಗೆ ಸಲಹೆ ನೀಡುತ್ತಾ, ಕ್ರೀಡೆಗಳು ಫಿಟ್ ಆಗಿರಲು ಸಹಾಯ ಮಾಡುವುದಲ್ಲದೆ ತಂಡದಲ್ಲಿ ಸಂಘಟಿತರಾಗಿ ಕೆಲಸ ಮಾಡುವುದು, ಸ್ವಂತದ ಪ್ರತಿಕ್ರಿಯೆಯಲ್ಲಿ ಸುಧಾರಣೆ, ಮಾನಸಿಕ ತಂತ್ರಗಳ ಅಳವಡಿಕೆ, ಒತ್ತಡವನ್ನು ನಿಭಾಯಿಸುವುದು ಮತ್ತು ಮುಖ್ಯವಾಗಿ ಕ್ರೀಡಾ ಮನೋಭಾವ ಬೆಳವಣಿಗೆ ಇತ್ಯಾದಿಗಳಂತಹ ಅನೇಕ ಜೀವನ ಕೌಶಲ್ಯಗಳನ್ನು ಕಲಿಸುತ್ತದೆ ಎಂದು ಅವರು ಹೇಳಿದರು.

ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕರು ಹಾಗೂ ಉಪಾಧ್ಯಕ್ಷರು ಆದ ಶ್ರೀಮತಿ ಇ.ವಿಜಯಾರವರು, ಮೈಸೂರು ವಿಭಾಗದ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಕಾರ್ಯಕಾರಿ ಸದಸ್ಯರು ಹಾಗೂ ಶಾಲಾ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಶಾಲೆಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

5 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

6 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

6 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

6 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

7 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

8 hours ago