ಜಿಲ್ಲೆಗಳು

ಲಲಿತಾ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನ ಆಚರಣೆ

ಮೈಸೂರು: ನಗರದ ಯಾದವಗಿರಿಯಲ್ಲಿರುವ ಲಲಿತಾ ಪ್ರೌಢಶಾಲೆಯಲ್ಲಿ ಇಂದು 2022-23 ವರ್ಷದ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ನಡೆಸಲಾಯಿತು.

ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಮೈಸೂರು ವಿಭಾಗದ ಅಧ್ಯಕ್ಷೆಯಾದ ಶ್ರೀಮತಿ ಪೂಜಾ ಅಗರ್ವಾಲ್ ರವರು ಮುಖ್ಯ ಅತಿಥಿಯಾಗಿದ್ದರು. ಅವರು ವೈಯಕ್ತಿಕ ಹಾಗೂ ತಂಡದ ಸ್ಪರ್ಧೆಗಳಲ್ಲಿ ಭಾಗವಹಿಸಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಭಾರತೀಯ ರೈಲ್ವೆಯ ಸಿಬ್ಬಂದಿಯಾಗಿ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಆಟಗಾರ್ತಿ ಹಾಗೂ ಪ್ರಸ್ತುತ ಭಾರತೀಯ ಮಹಿಳಾ ಬಾಸ್ಕೆಟ್‌ಬಾಲ್ ತಂಡದ ನಾಯಕಿಯಾದ ಎಂ.ಎಸ್.ಭಾಂದವ್ಯ ರವರನ್ನು ಸನ್ಮಾನಿಸಲಾಯಿತು.

ಶ್ರೀಮತಿ ಅಗರ್ವಾಲ್ ರವರು ವಿಜೇತರನ್ನು ಅಭಿನಂದಿಸುತ್ತಾ, ಪದಕ ಗೆದ್ದಿದ್ದರೂ, ಗೆಲ್ಲದಿದ್ದರೂ, ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರೂ ವಿಜೇತರು ಎಂದು ನಾನು ದೃಢವಾಗಿ ನಂಬಿದ್ದೇನೆ ಎಂದು ಹೇಳಿದರು. ಅಂತ್ಯದಲ್ಲಿ ಕ್ರೀಡೆಯು ಫಿಟ್ನೆಸ್, ಆರೋಗ್ಯ ಮತ್ತು ಸಂತೋಷದ ವಿಷಯದಲ್ಲಿ ದೊಡ್ಡ ವ್ಯತ್ಯಾಸ ತರುತ್ತದೆ. ಭಾಗವಹಿಸುವವರ ನಡುವೆ ಸಾಮಾಜಿಕ ಸಂಬಂಧಗಳನ್ನು ಬೆಳೆಸಲು ಕ್ರೀಡೆಗಳು ಸಹಾಯ ಮಾಡಿ ಸಮಾಜದಲ್ಲಿನ ಅವರ ಪಾತ್ರದ ಬಗ್ಗೆ ಹೆಚ್ಚಿನ ತಿಳುವಳಿಕೆಯನ್ನು ನೀಡುತ್ತದೆ ಎಂದು ಅವರು ಹೇಳಿದರು. ಅಂತಿಮವಾಗಿ, ಸುತ್ತಮುತ್ತಲೂ ಹರ್ಷವನ್ನು ತರಲು ಮತ್ತು ಸಮುದಾಯಕ್ಕೆ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸಲು ಇದು ವ್ಯಕ್ತಿಯನ್ನು ರೂಪಿಸುತ್ತದೆ ಎಂದು ಅವರು ತಿಳಿಸಿದರು.

ಶ್ರೀಮತಿ ಭಾಂದವ್ಯ ರವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ಮತ್ತು ಒತ್ತಡವು ಶಿಕ್ಷಣದ ಕಡೆಗೆ ಹೆಚ್ಚಾಗಿದ್ದು, ಆಟವಾಡುವುದು ಅಥವಾ ಕ್ರೀಡೆಗಳಲ್ಲಿ ಭಾಗವಹಿಸುವುದು ಕೇವಲ ಹವ್ಯಾಸವಾಗಿ ಮಾರ್ಪಟ್ಟಿದೆ ಎಂದು ವಿಷಾದಿಸಿದರು. ಅವರು ಯುವಜನರಿಗೆ ಸಲಹೆ ನೀಡುತ್ತಾ, ಕ್ರೀಡೆಗಳು ಫಿಟ್ ಆಗಿರಲು ಸಹಾಯ ಮಾಡುವುದಲ್ಲದೆ ತಂಡದಲ್ಲಿ ಸಂಘಟಿತರಾಗಿ ಕೆಲಸ ಮಾಡುವುದು, ಸ್ವಂತದ ಪ್ರತಿಕ್ರಿಯೆಯಲ್ಲಿ ಸುಧಾರಣೆ, ಮಾನಸಿಕ ತಂತ್ರಗಳ ಅಳವಡಿಕೆ, ಒತ್ತಡವನ್ನು ನಿಭಾಯಿಸುವುದು ಮತ್ತು ಮುಖ್ಯವಾಗಿ ಕ್ರೀಡಾ ಮನೋಭಾವ ಬೆಳವಣಿಗೆ ಇತ್ಯಾದಿಗಳಂತಹ ಅನೇಕ ಜೀವನ ಕೌಶಲ್ಯಗಳನ್ನು ಕಲಿಸುತ್ತದೆ ಎಂದು ಅವರು ಹೇಳಿದರು.

ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕರು ಹಾಗೂ ಉಪಾಧ್ಯಕ್ಷರು ಆದ ಶ್ರೀಮತಿ ಇ.ವಿಜಯಾರವರು, ಮೈಸೂರು ವಿಭಾಗದ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಕಾರ್ಯಕಾರಿ ಸದಸ್ಯರು ಹಾಗೂ ಶಾಲಾ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಶಾಲೆಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

11 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

11 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

11 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

12 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

12 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

13 hours ago