ಜಿಲ್ಲೆಗಳು

ಲಲಿತಾ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನ ಆಚರಣೆ

ಮೈಸೂರು: ನಗರದ ಯಾದವಗಿರಿಯಲ್ಲಿರುವ ಲಲಿತಾ ಪ್ರೌಢಶಾಲೆಯಲ್ಲಿ ಇಂದು 2022-23 ವರ್ಷದ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ನಡೆಸಲಾಯಿತು.

ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಮೈಸೂರು ವಿಭಾಗದ ಅಧ್ಯಕ್ಷೆಯಾದ ಶ್ರೀಮತಿ ಪೂಜಾ ಅಗರ್ವಾಲ್ ರವರು ಮುಖ್ಯ ಅತಿಥಿಯಾಗಿದ್ದರು. ಅವರು ವೈಯಕ್ತಿಕ ಹಾಗೂ ತಂಡದ ಸ್ಪರ್ಧೆಗಳಲ್ಲಿ ಭಾಗವಹಿಸಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಭಾರತೀಯ ರೈಲ್ವೆಯ ಸಿಬ್ಬಂದಿಯಾಗಿ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಆಟಗಾರ್ತಿ ಹಾಗೂ ಪ್ರಸ್ತುತ ಭಾರತೀಯ ಮಹಿಳಾ ಬಾಸ್ಕೆಟ್‌ಬಾಲ್ ತಂಡದ ನಾಯಕಿಯಾದ ಎಂ.ಎಸ್.ಭಾಂದವ್ಯ ರವರನ್ನು ಸನ್ಮಾನಿಸಲಾಯಿತು.

ಶ್ರೀಮತಿ ಅಗರ್ವಾಲ್ ರವರು ವಿಜೇತರನ್ನು ಅಭಿನಂದಿಸುತ್ತಾ, ಪದಕ ಗೆದ್ದಿದ್ದರೂ, ಗೆಲ್ಲದಿದ್ದರೂ, ಸ್ಪರ್ಧೆಯಲ್ಲಿ ಭಾಗವಹಿಸಿದವರೆಲ್ಲರೂ ವಿಜೇತರು ಎಂದು ನಾನು ದೃಢವಾಗಿ ನಂಬಿದ್ದೇನೆ ಎಂದು ಹೇಳಿದರು. ಅಂತ್ಯದಲ್ಲಿ ಕ್ರೀಡೆಯು ಫಿಟ್ನೆಸ್, ಆರೋಗ್ಯ ಮತ್ತು ಸಂತೋಷದ ವಿಷಯದಲ್ಲಿ ದೊಡ್ಡ ವ್ಯತ್ಯಾಸ ತರುತ್ತದೆ. ಭಾಗವಹಿಸುವವರ ನಡುವೆ ಸಾಮಾಜಿಕ ಸಂಬಂಧಗಳನ್ನು ಬೆಳೆಸಲು ಕ್ರೀಡೆಗಳು ಸಹಾಯ ಮಾಡಿ ಸಮಾಜದಲ್ಲಿನ ಅವರ ಪಾತ್ರದ ಬಗ್ಗೆ ಹೆಚ್ಚಿನ ತಿಳುವಳಿಕೆಯನ್ನು ನೀಡುತ್ತದೆ ಎಂದು ಅವರು ಹೇಳಿದರು. ಅಂತಿಮವಾಗಿ, ಸುತ್ತಮುತ್ತಲೂ ಹರ್ಷವನ್ನು ತರಲು ಮತ್ತು ಸಮುದಾಯಕ್ಕೆ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸಲು ಇದು ವ್ಯಕ್ತಿಯನ್ನು ರೂಪಿಸುತ್ತದೆ ಎಂದು ಅವರು ತಿಳಿಸಿದರು.

ಶ್ರೀಮತಿ ಭಾಂದವ್ಯ ರವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ಮತ್ತು ಒತ್ತಡವು ಶಿಕ್ಷಣದ ಕಡೆಗೆ ಹೆಚ್ಚಾಗಿದ್ದು, ಆಟವಾಡುವುದು ಅಥವಾ ಕ್ರೀಡೆಗಳಲ್ಲಿ ಭಾಗವಹಿಸುವುದು ಕೇವಲ ಹವ್ಯಾಸವಾಗಿ ಮಾರ್ಪಟ್ಟಿದೆ ಎಂದು ವಿಷಾದಿಸಿದರು. ಅವರು ಯುವಜನರಿಗೆ ಸಲಹೆ ನೀಡುತ್ತಾ, ಕ್ರೀಡೆಗಳು ಫಿಟ್ ಆಗಿರಲು ಸಹಾಯ ಮಾಡುವುದಲ್ಲದೆ ತಂಡದಲ್ಲಿ ಸಂಘಟಿತರಾಗಿ ಕೆಲಸ ಮಾಡುವುದು, ಸ್ವಂತದ ಪ್ರತಿಕ್ರಿಯೆಯಲ್ಲಿ ಸುಧಾರಣೆ, ಮಾನಸಿಕ ತಂತ್ರಗಳ ಅಳವಡಿಕೆ, ಒತ್ತಡವನ್ನು ನಿಭಾಯಿಸುವುದು ಮತ್ತು ಮುಖ್ಯವಾಗಿ ಕ್ರೀಡಾ ಮನೋಭಾವ ಬೆಳವಣಿಗೆ ಇತ್ಯಾದಿಗಳಂತಹ ಅನೇಕ ಜೀವನ ಕೌಶಲ್ಯಗಳನ್ನು ಕಲಿಸುತ್ತದೆ ಎಂದು ಅವರು ಹೇಳಿದರು.

ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕರು ಹಾಗೂ ಉಪಾಧ್ಯಕ್ಷರು ಆದ ಶ್ರೀಮತಿ ಇ.ವಿಜಯಾರವರು, ಮೈಸೂರು ವಿಭಾಗದ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಕಾರ್ಯಕಾರಿ ಸದಸ್ಯರು ಹಾಗೂ ಶಾಲಾ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಶಾಲೆಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

45 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

53 mins ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

15 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

19 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

19 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

20 hours ago