ನಾಗಮಂಗಲ: ಎರಡು ಕುಟುಂಬಗಳ ನಡುವಿನ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವುದರ ಜತೆಗೆ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಗಾಣಸಂದ್ರ ಗ್ರಾಮದ ರಾಮಕೃಷ್ಣಯ್ಯ ಎಂಬವರ ಪತ್ನಿ ಜಯಲಕ್ಷ್ಮಮ್ಮ (೫೦) ಕೊಲೆಯಾದವರು. ಜಮೀನು ಉಳುಮೆ ಮಾಡುತ್ತಿದ್ದ ಟ್ರಾಕ್ಟರ್ ಚಾಲಕ ನವೀನ್ ಮತ್ತು ಜಗಳ ಬಿಡಿಸಲು ಹೋದ ದೇವರಾಜು ಹಲ್ಲೆಗೊಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆತ್ತಿದ್ದಾರೆ. ಇದೇ ಗ್ರಾಮದ ಗೌಡಯ್ಯ, ಮಗ ಅನಿಲ್ಕುಮಾರ್, ಸಂಬಂಧಿ ಬಸವರಾಜು ಸೇರಿದಂತೆ ಎಂಟು ಮಂದಿಯ ಗುಂಪು ಸೇರಿ ಮಹಿಳೆಯ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿ, ಇಬ್ಬರನ್ನು ಗಾಯಗೊಳಿಸಿರುವ ಆರೋಪಿಗಳಾಗಿದ್ದಾರೆ.
ಜಯಲಕ್ಷ್ಮಮ್ಮನಿಗೆ 10 ವರ್ಷಗಳ ಹಿಂದೆ ಗಾಣಸಂದ್ರ ಗ್ರಾಮದ ಸ.ನಂ.೮೪ರ ಬಗರ್ ಹುಕುಂ ಸಾಗುವಳಿ ಜಮೀನು ಮಂಜೂರಾಗಿ ಇದಕ್ಕೆ ಸಂಬಂಧಿಸಿದ ಭೂ ದಾಖಲೆಗಳೂ ಸಹ ಇವರ ಹೆಸರಿನಲ್ಲಿ ಚಾಲ್ತಿಯಲ್ಲಿದ್ದವು. ಅಂದಿನಿಂದ ಜಮೀನು ಉಳುಮೆ ಮಾಡಿಸುತ್ತಿದ್ದ ಇವರಿಗೆ ಈ ಜಮೀನು ನಮಗೆ ಸೇರಬೇಕೆಂದು ಇದೇ ಗ್ರಾಮದ ಗೌಡಯ್ಯ ಮತ್ತವರ ಕುಟುಂಬಸ್ಥರು ತೊಂದರೆ ಕೊಡುತ್ತಿದ್ದರು.
ಅಲ್ಲದೆ ಜಮೀನಿನಲ್ಲಿ ಹಾಕಿಸಿರುವ ಕೊಳವೆ ಬಾವಿ, ವಿದ್ಯುತ್ ವೈರನ್ನು ಕತ್ತರಿಸಿ ಹಾಕಿದ್ದರು. ಎರಡು ಕುಟುಂಬಗಳ ನಡುವಿನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿತ್ತು ಎನ್ನಲಾಗಿದೆ.
ಬೆಂಗಳೂರಿನಲ್ಲಿ ನೆಲೆಸಿದ್ದ ಜಯಲಕ್ಷ್ಮಮ್ಮ ಜಮೀನು ಉಳುಮೆ ಮಾಡಿಸುವ ಸಲುವಾಗಿಯೇ ಭಾನುವಾರ ಗ್ರಾಮಕ್ಕೆ ಆಗಮಿಸಿದ್ದರು. ಜಮೀನು ಉಳುಮೆ ಮಾಡಿಸುತ್ತಿದ್ದ ವೇಳೆ ಏಕಾಏಕಿ ಬಂದ ಗೌಡಯ್ಯ, ಮಗ ಅನಿಲ್ಕುಮಾರ್ ಸೇರಿದಂತೆ ಎಂಟು ಮಂದಿಯ ಗುಂಪು ಗಲಾಟೆ ನಡೆಸಿ, ಟ್ರಾಕ್ಟರ್ ಚಾಲಕ ನವೀನ್ ಮತ್ತು ಜಗಳ ಬಿಡಿಸಲು ಬಂದ ದೇವರಾಜು ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ. ರಸ್ತೆ ಬದಿಯಲ್ಲಿ ನಿಂತಿದ್ದ ಜಯಲಕ್ಷ್ಮಮ್ಮನ ಮೇಲೆ ಕಾರು ಹತ್ತಿಸಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಜಯಲಕ್ಷಮ್ಮ ಸ್ಥಳದಲ್ಲೇ ಮೃತಪಟ್ಟರು.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕಾರ್ಯ ಪ್ರವೃತ್ತರಾದ ಬೆಳ್ಳೂರು ಠಾಣೆಯ ಪೊಲೀಸರು ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನುಳಿದ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರು ಆದಿಚುಂಚನಗಿರಿ ಆಸ್ಪತ್ರೆುಂಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆಯಾಗಿರುವ ಜಯಲಕ್ಮಮ್ಮ ಮೃತದೇಹವನ್ನು ಇದೇ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಆರೋಪಿಗಳ ಪತ್ತೆಗೆ ಶೋಧ
ಕೊಲೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳೂರು ಪೊಲೀಸರು ವಶಕ್ಕೆ ಪಡೆದಿರುವ ನಾಲ್ವರನ್ನು ಪಟ್ಟಣದ ಜೆಎಂಎಫ್ಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿ ಬಂಧಿಸಲಾಗಿದೆ. ಇನ್ನುಳಿದ ನಾಲ್ಕು ಮಂದಿ ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…