ಜಿಲ್ಲೆಗಳು

ಓದಿನಲ್ಲಿ ಶ್ರದ್ದೆ, ನಿರಂತರ ಪರಿಶ್ರಮ ಹಾಗೂ ಸತತ ಪ್ರಯತ್ನ ಇರಲಿ : ರಮೇಶ್ ರಾವ್ ಸಲಹೆ

ಮೈಸೂರು: ಓದಿನಲ್ಲಿ ಶ್ರದ್ಧೆ, ಪರಿಶ್ರಮ ಹಾಗೂ ಸತತ ಪ್ರಯತ್ನ ಇದ್ದರೆ ನೀವು ಅಂದುಕೊಂಡದ್ದನ್ನು ಸಾಧಿಸಬಹುದು ಎಂದು ಕರ್ಣಾಟಕ ಬ್ಯಾಂಕ್‌ನ ಮೈಸೂರು ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕ ರಮೇಶ್ ರಾವ್ ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮುಕ್ತಗಂಗೋತ್ರಿಯ ಕಾವೇರಿ ಸಭಾಂಗಣದಲ್ಲಿ ನಡೆದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಬ್ಯಾಂಕ್ ನೌಕರರಿಗೆ ಸಮಾಜಸೇವೆಯನ್ನು ಮಾಡಲು ವಿಫುಲ ಅವಕಾಶವಿದೆ. ಜನ್‌ಧನ್, ಆಧಾರ್ ಮತ್ತು ಮೊಬೈಲ್ ಪರಿಣಾಮವಾಗಿ ಮನೆ-ಮನೆಗಳಿಗೆ ಬ್ಯಾಂಕ್ ವ್ಯವಸ್ಥೆ ತಲುಪಿಸಲು ಅವಕಾಶವಿದೆ. ಸಾಮಾನ್ಯ ದಿನ ಪತ್ರಿಕೆ ಓದುವ ಜೊತಗೆ ಬಿಸನೆಸ್ ಪತ್ರಿಕೆಗಳನ್ನು ಓದುವ ಹಾಗೂ ಆರ್‌ಬಿಐ ಕಾಲಕಾಲಕ್ಕೆ ಜಾರಿಗೆ ತರುವ ನೀತಿ ನಿಯಮಗಳನ್ನು ತಿಳಿದುಕೊಳ್ಳುತ್ತಿರಬೇಕು ಎಂದು ಸಲಹೆ ನೀಡಿದರು.

ಬ್ಯಾಂಕಿಂಗ್ ವ್ಯವಸ್ಥೆ ಒಂದು ದೇಶದ ನರ ಮಂಡಲ ಇದ್ದಂತೆ. ಬ್ಯಾಂಕಿಂಗ್ ಸಾಕ್ಷರತೆ ಹೆಚ್ಚುತ್ತಿದೆ. ಇಂದು ಪ್ರತಿಯೊಬ್ಬ ವ್ಯಕ್ತಿಯು ಯಾವುದೇ ಸೌಲಭ್ಯವನ್ನು ಪಡೆಯಬೇಕಾದರೆ ಯಾವುದೇ ಬ್ಯಾಂಕುಗಳಿಗೆ ಹೋದರು ಅದರ ಪ್ರೋಂಜನ ಪಡೆಯಬಹುದು ಉದಾ. ಕ್ರೆಡಿಟ್‌ಕಾರ್ಡ್, ವಿವಿಧ ಬಗೆಯ ಲೋನ್‌ಗಳ ವ್ಯವಸ್ಥೆ ಎಲ್ಲಾ ರೀತಿಯ ವ್ಯವಸ್ಥೆಯನ್ನು ಬ್ಯಾಂಕ್‌ಗಳು ಒದಗಿಸುತ್ತವೆ ಎಂದರು.

ಸಾಮಾನ್ಯ ಗುಮಾಸ್ತನಾಗಿ ಸೇರ್ಪಡೆಯಾದರೆ ಪ್ರಾಮಾಣಿಕತೆ, ಪರಿಶ್ರಮದಿಂದ ಕರ್ತವ್ಯ ನಿರ್ವಹಿಸಿದರೆ ಉನ್ನತ ಹುದ್ದೆ ಅಲಂಕರಿಸಬಹುದು, ಕರ್ಣಾಟಕ ಬ್ಯಾಂಕ್‌ನಲ್ಲಿ ಸಾಮಾನ್ಯ ಗುಮಾಸ್ತನಾಗಿ ಸೇರಿದ ನಾನು ೪ ಜಿಲ್ಲೆಗಳ ೭೫ ಶಾಖೆಗಳನ್ನು ಹೊಂದಿರುವ ರೂ. ೮೦೦೦ ಕೋಟಿ ವಹಿವಾಟು ಹೊಂದಿರುವ ವ್ಯವಸ್ಥೆಗೆ ಮುಖ್ಯಸ್ಥನಾಗಿರುವುದೇ ಸಾಕ್ಷಿ ಎಂದು ಹೇಳಿದರು.

ಮುಕ್ತ ವಿವಿ ಪ್ರಭಾರ ಕುಲಸಚಿವ ಡಾ. ಎ. ಖಾದರ್ ಪಾಷ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸೋಲು ಸಹಜ. ಇದಕ್ಕೆ ಯಾರೂ ನಿರಾಶರಾಗದೇ ಮತ್ತೆ ಮತ್ತೆ ಪ್ರಯತ್ನಿಸಬೇಕು. ಇಂದು ಯುವ ಸಮೂಹವನ್ನು ಮೊಬೈಲ್ ಡಿಸ್ಟರ್ಬ್ ಮಾಡುತ್ತಿದೆ. ಹಾಗಾಗಿ ಮೊಬೈಲ್‌ನ ಅಗತ್ಯ ಎಷ್ಟು ಎಂಬ ಬಗ್ಗೆ ತಿಳಿದುಕೊಂಡು, ಅಗತ್ಯವಿದ್ದಷ್ಟು ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿಯೇ ಡಿಜಿಟಲ್ ಲೈಬ್ರರಿಯನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿವಿ ಪರೀಕ್ಷಾಂಗ ಕುಲಸಚಿವ ಡಾ. ಕೆ. ಬಿ. ಪ್ರವೀಣ, ಅಧ್ಯಯನ ಕೇಂದ್ರ ಡೀನ್ ಡಾ. ಎಂ. ರಾಮನಾಥಂ ನಾಯ್ಡು, ಕರ್ಣಾಟಕ ಬ್ಯಾಂಕ್‌ನ ಅಧಿಕಾರಿ ಹೆಚ್. ಬಾಲಕೃಷ್ಣ, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್ ಹೊನ್ನೂರು, ಗಣೇಶ್ ಕೆ.ಜಿ. ಕೊಪ್ಪಲ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

andolanait

Recent Posts

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

1 hour ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

1 hour ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

1 hour ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

2 hours ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

2 hours ago

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

2 hours ago