ಜಿಲ್ಲೆಗಳು

ಓದಿನಲ್ಲಿ ಶ್ರದ್ದೆ, ನಿರಂತರ ಪರಿಶ್ರಮ ಹಾಗೂ ಸತತ ಪ್ರಯತ್ನ ಇರಲಿ : ರಮೇಶ್ ರಾವ್ ಸಲಹೆ

ಮೈಸೂರು: ಓದಿನಲ್ಲಿ ಶ್ರದ್ಧೆ, ಪರಿಶ್ರಮ ಹಾಗೂ ಸತತ ಪ್ರಯತ್ನ ಇದ್ದರೆ ನೀವು ಅಂದುಕೊಂಡದ್ದನ್ನು ಸಾಧಿಸಬಹುದು ಎಂದು ಕರ್ಣಾಟಕ ಬ್ಯಾಂಕ್‌ನ ಮೈಸೂರು ಪ್ರಾದೇಶಿಕ ಕಛೇರಿಯ ಸಹಾಯಕ ಮಹಾ ಪ್ರಬಂಧಕ ರಮೇಶ್ ರಾವ್ ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮುಕ್ತಗಂಗೋತ್ರಿಯ ಕಾವೇರಿ ಸಭಾಂಗಣದಲ್ಲಿ ನಡೆದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಬ್ಯಾಂಕ್ ನೌಕರರಿಗೆ ಸಮಾಜಸೇವೆಯನ್ನು ಮಾಡಲು ವಿಫುಲ ಅವಕಾಶವಿದೆ. ಜನ್‌ಧನ್, ಆಧಾರ್ ಮತ್ತು ಮೊಬೈಲ್ ಪರಿಣಾಮವಾಗಿ ಮನೆ-ಮನೆಗಳಿಗೆ ಬ್ಯಾಂಕ್ ವ್ಯವಸ್ಥೆ ತಲುಪಿಸಲು ಅವಕಾಶವಿದೆ. ಸಾಮಾನ್ಯ ದಿನ ಪತ್ರಿಕೆ ಓದುವ ಜೊತಗೆ ಬಿಸನೆಸ್ ಪತ್ರಿಕೆಗಳನ್ನು ಓದುವ ಹಾಗೂ ಆರ್‌ಬಿಐ ಕಾಲಕಾಲಕ್ಕೆ ಜಾರಿಗೆ ತರುವ ನೀತಿ ನಿಯಮಗಳನ್ನು ತಿಳಿದುಕೊಳ್ಳುತ್ತಿರಬೇಕು ಎಂದು ಸಲಹೆ ನೀಡಿದರು.

ಬ್ಯಾಂಕಿಂಗ್ ವ್ಯವಸ್ಥೆ ಒಂದು ದೇಶದ ನರ ಮಂಡಲ ಇದ್ದಂತೆ. ಬ್ಯಾಂಕಿಂಗ್ ಸಾಕ್ಷರತೆ ಹೆಚ್ಚುತ್ತಿದೆ. ಇಂದು ಪ್ರತಿಯೊಬ್ಬ ವ್ಯಕ್ತಿಯು ಯಾವುದೇ ಸೌಲಭ್ಯವನ್ನು ಪಡೆಯಬೇಕಾದರೆ ಯಾವುದೇ ಬ್ಯಾಂಕುಗಳಿಗೆ ಹೋದರು ಅದರ ಪ್ರೋಂಜನ ಪಡೆಯಬಹುದು ಉದಾ. ಕ್ರೆಡಿಟ್‌ಕಾರ್ಡ್, ವಿವಿಧ ಬಗೆಯ ಲೋನ್‌ಗಳ ವ್ಯವಸ್ಥೆ ಎಲ್ಲಾ ರೀತಿಯ ವ್ಯವಸ್ಥೆಯನ್ನು ಬ್ಯಾಂಕ್‌ಗಳು ಒದಗಿಸುತ್ತವೆ ಎಂದರು.

ಸಾಮಾನ್ಯ ಗುಮಾಸ್ತನಾಗಿ ಸೇರ್ಪಡೆಯಾದರೆ ಪ್ರಾಮಾಣಿಕತೆ, ಪರಿಶ್ರಮದಿಂದ ಕರ್ತವ್ಯ ನಿರ್ವಹಿಸಿದರೆ ಉನ್ನತ ಹುದ್ದೆ ಅಲಂಕರಿಸಬಹುದು, ಕರ್ಣಾಟಕ ಬ್ಯಾಂಕ್‌ನಲ್ಲಿ ಸಾಮಾನ್ಯ ಗುಮಾಸ್ತನಾಗಿ ಸೇರಿದ ನಾನು ೪ ಜಿಲ್ಲೆಗಳ ೭೫ ಶಾಖೆಗಳನ್ನು ಹೊಂದಿರುವ ರೂ. ೮೦೦೦ ಕೋಟಿ ವಹಿವಾಟು ಹೊಂದಿರುವ ವ್ಯವಸ್ಥೆಗೆ ಮುಖ್ಯಸ್ಥನಾಗಿರುವುದೇ ಸಾಕ್ಷಿ ಎಂದು ಹೇಳಿದರು.

ಮುಕ್ತ ವಿವಿ ಪ್ರಭಾರ ಕುಲಸಚಿವ ಡಾ. ಎ. ಖಾದರ್ ಪಾಷ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸೋಲು ಸಹಜ. ಇದಕ್ಕೆ ಯಾರೂ ನಿರಾಶರಾಗದೇ ಮತ್ತೆ ಮತ್ತೆ ಪ್ರಯತ್ನಿಸಬೇಕು. ಇಂದು ಯುವ ಸಮೂಹವನ್ನು ಮೊಬೈಲ್ ಡಿಸ್ಟರ್ಬ್ ಮಾಡುತ್ತಿದೆ. ಹಾಗಾಗಿ ಮೊಬೈಲ್‌ನ ಅಗತ್ಯ ಎಷ್ಟು ಎಂಬ ಬಗ್ಗೆ ತಿಳಿದುಕೊಂಡು, ಅಗತ್ಯವಿದ್ದಷ್ಟು ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿಯೇ ಡಿಜಿಟಲ್ ಲೈಬ್ರರಿಯನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿವಿ ಪರೀಕ್ಷಾಂಗ ಕುಲಸಚಿವ ಡಾ. ಕೆ. ಬಿ. ಪ್ರವೀಣ, ಅಧ್ಯಯನ ಕೇಂದ್ರ ಡೀನ್ ಡಾ. ಎಂ. ರಾಮನಾಥಂ ನಾಯ್ಡು, ಕರ್ಣಾಟಕ ಬ್ಯಾಂಕ್‌ನ ಅಧಿಕಾರಿ ಹೆಚ್. ಬಾಲಕೃಷ್ಣ, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್ ಹೊನ್ನೂರು, ಗಣೇಶ್ ಕೆ.ಜಿ. ಕೊಪ್ಪಲ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

andolanait

Recent Posts

ಅಂದು ಮಿನಿ ವಿಧಾನಸೌಧ, ಇಂದು ಪ್ರಮೋದಾ ದೇವಿ ಒಡೆಯರ ಆಸ್ತಿ?

ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…

1 min ago

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

21 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

21 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

21 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

21 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

21 hours ago