ಜಿಲ್ಲೆಗಳು

ಕಲಿಕಾ ಚೇತರಿಕೆ ಕಾರ್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಅನುಕೂಲ : ನೋಡಲ್ ಅಧಿಕಾರಿ ಚುಂಚಯ್ಯ

ಹನೂರು : ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ಸರಿದೂಗಿಸಲು ಕಲಿಕಾ ಚೇತರಿಕೆ ಎಂಬ ವಿನೂತನ ಕಾರ್ಯಕ್ರಮ ಜಾರಿಗೆ ತಂದಿರುವುದು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ನೋಡಲ್ ಅಧಿಕಾರಿ ಚುಂಚಯ್ಯ ತಿಳಿಸಿದರು.

ತಾಲೂಕಿನ ಒಡೆಯರ್ ಪಾಳ್ಯ ಕ್ಲಸ್ಟರ್ ನ ಒಡೆಯರ ಪಾಳ್ಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿನ ಯುವ ಪೀಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿಸಿಕೊಂಡು ತಮ್ಮ ಜೀವನವನ್ನು ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ವಿದ್ಯೆಯಲ್ಲಿ ಹಿಂದುಳಿದರೆ ತಮ್ಮ ಜೀವನದ ಉದ್ದಕ್ಕೂ ಕಷ್ಟವನ್ನು ಅನುಭವಿಸಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ವಿದ್ಯಾರ್ಥಿ ಜೀವನವನ್ನು ವಿದ್ಯಾಭ್ಯಾಸಕಷ್ಟೇ ಮೀಸಲಿರಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮವು ಮುಖ್ಯ ರಸ್ತೆಯಲ್ಲಿ ಸಾಗಿ ಕುಣಿದು ಸಂಭ್ರಮಿಸಿದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕಿಯರು ಆರತಿ ಬೆಳಗಿ ಬರಮಾಡಿಕೊಂಡರೇ, ವಿದ್ಯಾರ್ಥಿಗಳು ತಮ್ಮ ಶಿಕ್ಷಕರುಗಳನ್ನು ಎತ್ತಿನ ಗಾಡಿಯಲ್ಲಿ ಕರೆತರುವ ಮೂಲಕ ವಿಶಿಷ್ಟವಾಗಿ ಬರಮಾಡಿಕೊಂಡರು.ಕಲಿಕಾ ಹಬ್ಬದಲ್ಲಿ ಆಕರ್ಷಣೆಯ ಬಿಂದುವಾಗಿದ್ದ ಏರುವ ಹಲ್ಲಿ ಗುರುತ್ವಾಕರ್ಷಣೆ ಹಾಗೂ ನೋರೆ ಹಾವು, ತಂತಿಯ ಸುರುಳಿ ಹಾವು ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಹುತ್ತೂರು ಗ್ರಾಮದ ಅಧ್ಯಕ್ಷೆ ಗಿರಿಜಾ ಶೇಖರ್, ಉಪಾಧ್ಯಕ್ಷ ಪುಷ್ಪಲತಾ ಬಸವರಾಜ್, ಸದಸ್ಯರುಗಳಾದ ಮಹೇಶ್ ಪಾಪತಿ, ಮಂಗಳಮ್ಮ, ಇಸಿಓ ಚಿನ್ನಪ್ಪಯ್ಯ, ಸಿ ಆರ್ ಪಿ ನಟೇಶ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ವಿ, ಮುಖ್ಯ ಶಿಕ್ಷಕರುಗಳಾದ ನಾಗೇಶ್, ಮಾದೇಶ್, ಜಯ ಪ್ರಕಾಶ್,ಮಹದೇವಸ್ವಾಮಿ, ಬಾಬು,ಎಸ್ ಡಿ ಎಮ್ ಸಿ ಅಧ್ಯಕ್ಷ ಮಹದೇವ ಪ್ರಭು, ಸಂಪನ್ಮೂಲ ವ್ಯಕ್ತಿ ಬೈಲೂರು ಪ್ರೌಢಶಾಲೆಯ ಮೋಹನ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನಿರ್ದೇಶಕ ಚಂದ್ರಶೇಖರ್ ಹುತ್ತೂರು ಹಾಗೂ ಬೈಲೂರು ಗ್ರಾಪಂ ಸದಸ್ಯರುಗಳು ಹಾಗೂ ಎಲ್ಲಾ ಶಾಲೆಯ ಶಿಕ್ಷಕರುಗಳು ಭಾಗವಹಿಸಿದ್ದರು.

andolanait

Recent Posts

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

10 mins ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

18 mins ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

25 mins ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

4 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

4 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…

4 hours ago