ಜಿಲ್ಲೆಗಳು

ಕಲಿಕೆಗೆ ಸಿಗುವ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಜೊತೆಗೆ ಕಲಿಕೆ ನಿರಂತರವಾಗಿರಬೇಕು : ನಾಗತಿಹಳ್ಳಿ ಚಂದ್ರಶೇಖರ್

ಮೈಸೂರು :  ಕಲಿಕೆಗಾಗಿ ಸಿಗುವ ಯಾವುದೇ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಕಲಿಕೆಯು ನಿರಂತರವಾಗಿರಬೇಕು ಎಂದು ಹಿರಿಯ ಚಲನಚಿತ್ರ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೇಳಿದರು.
ಗುರುವಾರ ನಗರದ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ ನಡೆದ ಚಿತ್ರ ನಿರ್ಮಾಣ ಪೂರ್ವ ತಯಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಲಿಕೆಗಳಿಗಾಗಿಯೇ ಬೆಂಗಳೂರಿನಲ್ಲಿ ಒಂದು ಪುಟ್ಟ ಸಿನಿಮಾ ಶಾಲೆಯನ್ನು ನಡೆಸುತ್ತೇನೆ. ಇದರ ಕಷ್ಟನಷ್ಟಗಳ ಬಗ್ಗೆ ನನಗೆ ಅರಿವಿದೆ. ಇಲ್ಲಿ ಕಲಿಕೆಯನ್ನು 03 ದಿನಗಳಲ್ಲಿ ಕಲಿಯಲು ಸಾಧ್ಯವಿಲ್ಲ. ದಸರಾ ವಿಶೇಷವಾಗಿ ಹಲವಾರು ವೇದಿಕೆಗಳು ಸಿದ್ದಗೊಳ್ಳುತ್ತದೆ. ಅಂತಹ ವೇದಿಕೆಗಳನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಇಲ್ಲಿಗೆ ಬಂದರೆ ಯಾರೇ ಆಗಲಿ ಬರಿ ಕೈಯಲ್ಲಿ ಹೋಗಬಾರದು. ಏನನ್ನಾದರೂ ಕಲಿತು ಹಾಗೂ ಪಡೆದುಕೊಂಡು ಹೋಗಬೇಕು. ಕಾರಣ ಅರಿವು ಎಂದು ತುಂಬಾ ಮುಖ್ಯ. ಪ್ರತಿಭೆಯು ವ್ಯಕ್ತಿಗತವಾದದ್ದು, ಹೃದ್ಘತವಾದದ್ದು. ಇದನ್ನು ಯಾರು ಹೇಳಿಕೊಡಲು ಸಾಧ್ಯವಿಲ್ಲ. ಹೀಗಾಗಿ ಪ್ರತಿಭೆಯನ್ನು ಆಸಕ್ತಿಯಿಂದ ಕಲಿಯಬೇಕು ಹಾಗೂ ಸಮಾಜದ ಜೊತೆ ಒಡನಾಟವಿಟ್ಟುಕೊಳ್ಳುವುದರಿಂದ ಪ್ರತಿಭೆಯನ್ನು ಮೊನಚುಗೊಳಿಸಿಕೊಳ್ಳಬೇಕು ಎಂದು ಹೇಳಿದರು.
ನಮ್ಮಲ್ಲಿರುವ ದಟ್ಟವಾದ ಪ್ರತಿಭೆಯನ್ನು ಹೊರಗಿನಿಂದ ಯಾರು ಕಲಿಸಲು ಸಾಧ್ಯವಿಲ್ಲ. ಯಾರಿಂದಲು ಕೊಡಲು ಹಾಗೂ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪ್ರತಿಭೆ ಆಸ್ತಿ ಇದ್ದಹಾಗೆ. ಹೀಗಾಗಿ ಪ್ರತಿಭೆಯು ಸೃಜನಶೀಲ ಕಾರ್ಯದ ಮೂಲಕ ಹೊರಹೊಮ್ಮುತ್ತದೆ ಎಂದರು. ಸಿನಿಮಾ ಎಂಬುದು ಇಂದು ಎಷ್ಟರ ಮಟ್ಟಿಗೆ ಬೆಳೆದಿದೆ ಎಂದರೆ ಸಾವಿರಾರು ವರ್ಷಗಳಿಂದ ಬಂದಿದ್ದ ಸಂಗೀತ, ಸಾಹಿತ್ಯ, ನಾಟಕಗಳನ್ನು ಮೊಸಕುಗೊಳಿಸಿ ಅದರ ಮೇಲೆ ನಿಂತು ವಿಜೃಂಭಿಸುತ್ತಿರುವ ಒಂದು ಪ್ರಭಾವಶಾಲಿ ಮಾಧ್ಯಮ. ಅದರ ಭಾಗಗವಾಗಿ ವೆಬ್ ಸಿರೀಸ್, ಡ್ಯಾಕುಮೆಂಟರಿ, ಕಿರುಚಿತ್ರಗಳಿವೆ. ಇವುಗಳಲ್ಲಿ ನೀವು ತೊಡಗಿಸಿಕೊಳ್ಳಲು ಹಾಗೂ ಬೆಳೆಯಲು ಸಾಕಷ್ಟು ಅವಕಾಶಗಳಿವೆ ಅಷ್ಟೇ ಕಠಿಣವಾದ ಸ್ಪರ್ಧೆ ಇದೆ. ಹೀಗಾಗಿ ಇದರಲ್ಲಿ ಯಶಸ್ಸು ಪಡೆಯಲು ಬಯಸುವವರು ಶ್ರಮ ಪಡಬೇಕು ಎಂದರು. ಸಿನಿಮಾಕ್ಕೆ ಅದರದ್ದೆ ಆದ ವ್ಯಾಕರಣ ಹಾಗೂ ಮಾನದಂಡಗಳಿವೆ. ಇಂತಹ ಕಡೆಗೆ ತರುಣ ವಿದ್ಯಾರ್ಥಿಗಳು, ಆಸಕ್ತರು ಗಮನ ಹರಿಸಬೇಕು. ಸಿನಿಮಾ ಎಂಬುದು ಸಾಹಿತ್ಯ, ಸಂಗೀತ, ನೃತ್ಯ, ಶಿಲ್ಪಕಲೆ ಹಾಗೂ ಚಿತ್ರಕಲೆಗಳಿಗಿಂತ ತುಂಬಾ ಭಿನ್ನವಾದದ್ದು. ಇದೊಂದು ಬಹುಪ್ರತಿಭೆಗಳನ್ನು ಬೆಳಕಿಗೆ ತರುವ ಮಾಧ್ಯಮವಾಗಿದೆ ಎಂದರು.

ದಸರಾ ಚಲನಚಿತ್ರೋತ್ಸವದ ವಿಶೇಷಾಧಿಕಾರಿ ಆರ್.ಶೇಷ ಅವರು ಮಾತನಾಡಿ, ಇಂತಹ ಕಾರ್ಯಾಗಾರವನ್ನು ಶಿಬಿರಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೆ ಚಲನಚಿತ್ರೋತ್ಸವವು ಶೀಘ್ರವಾಗಿ ನಡೆಲಿದ್ದು ಅದರ ಉದ್ಘಾಟನೆಯನ್ನು ಚಲನಚಿತ್ರ ನಟ ಶಿವರಾಜ್ ಕುಮಾರ್ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಕೆಯ ಸಹಾಯಕ ನಿದೇಶಕರಾದ ಹಾಗೂ ಚಲನಚಿತ್ರ ಉಪಸಮಿತಿಯ ಕಾರ್ಯದರ್ಶಿ ಟಿ.ಕೆ ಹರೀಶ್, ನಿರ್ದೇಶಕರಾದ ಮಂಸೋರೆ, ಪ್ರವೀಣ್ ಕೃಪಾಕರ್ ಸೇರಿದಂತೆ ಇತರರು ಹಾಜರಿದ್ದರು.

andolanait

Recent Posts

ಮೈಸೂರು ಮೃಗಾಲಯದ ಹುಲಿ ʼಪೃಥ್ವಿʼ ಇನ್ನಿಲ್ಲ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…

53 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಏಪ್ರಿಲ್‌ 9  

1 hour ago

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

2 hours ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

2 hours ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

12 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

14 hours ago