ಜಿಲ್ಲೆಗಳು

ಕಲಿಕೆಗೆ ಸಿಗುವ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಜೊತೆಗೆ ಕಲಿಕೆ ನಿರಂತರವಾಗಿರಬೇಕು : ನಾಗತಿಹಳ್ಳಿ ಚಂದ್ರಶೇಖರ್

ಮೈಸೂರು :  ಕಲಿಕೆಗಾಗಿ ಸಿಗುವ ಯಾವುದೇ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಕಲಿಕೆಯು ನಿರಂತರವಾಗಿರಬೇಕು ಎಂದು ಹಿರಿಯ ಚಲನಚಿತ್ರ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೇಳಿದರು.
ಗುರುವಾರ ನಗರದ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ ನಡೆದ ಚಿತ್ರ ನಿರ್ಮಾಣ ಪೂರ್ವ ತಯಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಲಿಕೆಗಳಿಗಾಗಿಯೇ ಬೆಂಗಳೂರಿನಲ್ಲಿ ಒಂದು ಪುಟ್ಟ ಸಿನಿಮಾ ಶಾಲೆಯನ್ನು ನಡೆಸುತ್ತೇನೆ. ಇದರ ಕಷ್ಟನಷ್ಟಗಳ ಬಗ್ಗೆ ನನಗೆ ಅರಿವಿದೆ. ಇಲ್ಲಿ ಕಲಿಕೆಯನ್ನು 03 ದಿನಗಳಲ್ಲಿ ಕಲಿಯಲು ಸಾಧ್ಯವಿಲ್ಲ. ದಸರಾ ವಿಶೇಷವಾಗಿ ಹಲವಾರು ವೇದಿಕೆಗಳು ಸಿದ್ದಗೊಳ್ಳುತ್ತದೆ. ಅಂತಹ ವೇದಿಕೆಗಳನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಇಲ್ಲಿಗೆ ಬಂದರೆ ಯಾರೇ ಆಗಲಿ ಬರಿ ಕೈಯಲ್ಲಿ ಹೋಗಬಾರದು. ಏನನ್ನಾದರೂ ಕಲಿತು ಹಾಗೂ ಪಡೆದುಕೊಂಡು ಹೋಗಬೇಕು. ಕಾರಣ ಅರಿವು ಎಂದು ತುಂಬಾ ಮುಖ್ಯ. ಪ್ರತಿಭೆಯು ವ್ಯಕ್ತಿಗತವಾದದ್ದು, ಹೃದ್ಘತವಾದದ್ದು. ಇದನ್ನು ಯಾರು ಹೇಳಿಕೊಡಲು ಸಾಧ್ಯವಿಲ್ಲ. ಹೀಗಾಗಿ ಪ್ರತಿಭೆಯನ್ನು ಆಸಕ್ತಿಯಿಂದ ಕಲಿಯಬೇಕು ಹಾಗೂ ಸಮಾಜದ ಜೊತೆ ಒಡನಾಟವಿಟ್ಟುಕೊಳ್ಳುವುದರಿಂದ ಪ್ರತಿಭೆಯನ್ನು ಮೊನಚುಗೊಳಿಸಿಕೊಳ್ಳಬೇಕು ಎಂದು ಹೇಳಿದರು.
ನಮ್ಮಲ್ಲಿರುವ ದಟ್ಟವಾದ ಪ್ರತಿಭೆಯನ್ನು ಹೊರಗಿನಿಂದ ಯಾರು ಕಲಿಸಲು ಸಾಧ್ಯವಿಲ್ಲ. ಯಾರಿಂದಲು ಕೊಡಲು ಹಾಗೂ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪ್ರತಿಭೆ ಆಸ್ತಿ ಇದ್ದಹಾಗೆ. ಹೀಗಾಗಿ ಪ್ರತಿಭೆಯು ಸೃಜನಶೀಲ ಕಾರ್ಯದ ಮೂಲಕ ಹೊರಹೊಮ್ಮುತ್ತದೆ ಎಂದರು. ಸಿನಿಮಾ ಎಂಬುದು ಇಂದು ಎಷ್ಟರ ಮಟ್ಟಿಗೆ ಬೆಳೆದಿದೆ ಎಂದರೆ ಸಾವಿರಾರು ವರ್ಷಗಳಿಂದ ಬಂದಿದ್ದ ಸಂಗೀತ, ಸಾಹಿತ್ಯ, ನಾಟಕಗಳನ್ನು ಮೊಸಕುಗೊಳಿಸಿ ಅದರ ಮೇಲೆ ನಿಂತು ವಿಜೃಂಭಿಸುತ್ತಿರುವ ಒಂದು ಪ್ರಭಾವಶಾಲಿ ಮಾಧ್ಯಮ. ಅದರ ಭಾಗಗವಾಗಿ ವೆಬ್ ಸಿರೀಸ್, ಡ್ಯಾಕುಮೆಂಟರಿ, ಕಿರುಚಿತ್ರಗಳಿವೆ. ಇವುಗಳಲ್ಲಿ ನೀವು ತೊಡಗಿಸಿಕೊಳ್ಳಲು ಹಾಗೂ ಬೆಳೆಯಲು ಸಾಕಷ್ಟು ಅವಕಾಶಗಳಿವೆ ಅಷ್ಟೇ ಕಠಿಣವಾದ ಸ್ಪರ್ಧೆ ಇದೆ. ಹೀಗಾಗಿ ಇದರಲ್ಲಿ ಯಶಸ್ಸು ಪಡೆಯಲು ಬಯಸುವವರು ಶ್ರಮ ಪಡಬೇಕು ಎಂದರು. ಸಿನಿಮಾಕ್ಕೆ ಅದರದ್ದೆ ಆದ ವ್ಯಾಕರಣ ಹಾಗೂ ಮಾನದಂಡಗಳಿವೆ. ಇಂತಹ ಕಡೆಗೆ ತರುಣ ವಿದ್ಯಾರ್ಥಿಗಳು, ಆಸಕ್ತರು ಗಮನ ಹರಿಸಬೇಕು. ಸಿನಿಮಾ ಎಂಬುದು ಸಾಹಿತ್ಯ, ಸಂಗೀತ, ನೃತ್ಯ, ಶಿಲ್ಪಕಲೆ ಹಾಗೂ ಚಿತ್ರಕಲೆಗಳಿಗಿಂತ ತುಂಬಾ ಭಿನ್ನವಾದದ್ದು. ಇದೊಂದು ಬಹುಪ್ರತಿಭೆಗಳನ್ನು ಬೆಳಕಿಗೆ ತರುವ ಮಾಧ್ಯಮವಾಗಿದೆ ಎಂದರು.

ದಸರಾ ಚಲನಚಿತ್ರೋತ್ಸವದ ವಿಶೇಷಾಧಿಕಾರಿ ಆರ್.ಶೇಷ ಅವರು ಮಾತನಾಡಿ, ಇಂತಹ ಕಾರ್ಯಾಗಾರವನ್ನು ಶಿಬಿರಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೆ ಚಲನಚಿತ್ರೋತ್ಸವವು ಶೀಘ್ರವಾಗಿ ನಡೆಲಿದ್ದು ಅದರ ಉದ್ಘಾಟನೆಯನ್ನು ಚಲನಚಿತ್ರ ನಟ ಶಿವರಾಜ್ ಕುಮಾರ್ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಕೆಯ ಸಹಾಯಕ ನಿದೇಶಕರಾದ ಹಾಗೂ ಚಲನಚಿತ್ರ ಉಪಸಮಿತಿಯ ಕಾರ್ಯದರ್ಶಿ ಟಿ.ಕೆ ಹರೀಶ್, ನಿರ್ದೇಶಕರಾದ ಮಂಸೋರೆ, ಪ್ರವೀಣ್ ಕೃಪಾಕರ್ ಸೇರಿದಂತೆ ಇತರರು ಹಾಜರಿದ್ದರು.

andolanait

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

7 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

21 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

21 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

21 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

21 hours ago