ಜಿಲ್ಲೆಗಳು

‘ಕೀಳರಿಮೆ ಬಿಟ್ಟರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು’

ಕರಾಮುವಿಯಿಂದ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಚಾಲನೆ ನೀಡಿ ಎಸ್‌ಪಿ ಚೇತನ್ ಅಭಿಮತ

ಮೈಸೂರು: ಕೀಳರಿಮೆ ಬಿಟ್ಟು ನಿರಂತರವಾಗಿ ಅಭ್ಯಾಸ ಮಾಡಿದಾಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಹೇಳಿದರು.

ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಭಾಗದಿಂದ ಬರುವ ಅನೇಕ ವಿದ್ಯಾರ್ಥಿಗಳಿಗೆ ‘ನಾನು ಹಳ್ಳಿಯವನು, ಇಂಗ್ಲಿಷ್ ಬರುವುದಿಲ್ಲ, ನಮ್ಮಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಧ್ಯವೆ’ ಎಂಬ ಕೀಳರಿಮೆ ಇರುತ್ತದೆ. ಇಂತಹ ಭಾವನೆಗಳನ್ನು ತೆಗೆದು ಹಾಕಿ ನಿರಂತರವಾಗಿ, ಕ್ರಮಬದ್ಧವಾಗಿ ಅಭ್ಯಾಸದಲ್ಲಿ ತೊಡಗಿಕೊಂಡಾಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬಹುದು ಎಂದು ಕಿವಿಮಾತು ಹೇಳಿದರು.

ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಯಾವುದೋ ಒಂದು ಅಥವಾ ಕೆಲವು ವಿಷಯಗಳನ್ನು ಮಾತ್ರ ಓದಿರುತ್ತೀರಾ? ಆದರೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬೇಕೆಂದರೆ ಎಲ್ಲ ವಿಷಯಗಳ ಜ್ಞಾನವೂ ಇರಬೇಕು ಮತ್ತು ಓದಬೇಕು. ಹಾಗಾಗಿ, ಆರಂಭಿಕವಾಗಿ ೫ನೇ ತರಗತಿಯಿಂದ ೧೦ ತರಗತಿಯ ಎಲ್ಲ ಪುಸ್ತಕಗಳನ್ನು ಒಂದೆರಡು ಬಾರಿ ಓದುವುದು ಒಳ್ಳೆಯದು. ಆನಂತರ ನಿಮ್ಮ ಪರೀಕ್ಷೆಯ ಸಿಲಬಸ್‌ಗಳನ್ನು ಓದಲು ಮತ್ತು ಅರ್ಥ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ೭ರಿಂದ ೫ ವರ್ಷಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಯನ್ನು ಇಟ್ಟುಕೊಂಡು ಅಭ್ಯಾಸ ಮಾಡಿ ಎಂದು ತಿಳಿಸಿದರು.

ಕರಾಮುವಿ ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಷ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರನ್ನು ಸನ್ಮಾನಿಸಲಾಯಿತು. ಕರಾಮುವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಪರೀಕ್ಷಾಂಗ ಕುಲಸಚಿವ ಪ್ರವೀಣ್, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಹಾಜರಿದ್ದರು. ಸುಮಾರು ೧೦೦ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.

 

 

 

 

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago