ಹನೂರು : ಹಲವಾರು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ನರಭಕ್ಷಕ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದ್ದಾರೆ .
ತಾಲೂಕಿನ ಕೆ ವಿ ಎನ್ ದೊಡ್ಡಿ, ಕೆಂಚಯ್ಯನದೊಡ್ಡಿ, ಭಾಗದ ಜನರನ್ನು ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಕೆಂಚಯ್ಯನದೊಡ್ಡಿಗ್ರಾಮದ ಅರಣ್ಯ ಪ್ರದೇಶದ ಬಳಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ಸೆರೆ ಸಿಕ್ಕ ಚಿರತೆ : ಹಲವಾರು ಹಸು, ಮೇಕೆಗಳು ಸಾಲದು ಎಂಬಂತೆ ಮನುಷ್ಯನನ್ನು ಸಹ ಕೊಂದು ಈ ಭಾಗದ ಜನರ ನಿದ್ದೆಗೆಡಿಸಿತ್ತು.ಹಲವಾರು ದಿನಗಳಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳಿಗೂ ಸಹ ನಿದ್ದೆಗೆಡಿಸಿತ್ತು. ಇದರಿಂದ ಎಲ್ಲರಿಗೂ ತೊಂದರೆಯಾಗಿತ್ತು. ಕೊನೆಗೂ ಕೆಂಚಯ್ಯನದೊಡ್ಡಿ ಬಳಿ ಸಿಕ್ಕಿ ಬಿದ್ದಿದೆ.
ನಿಟ್ಟುಸಿರು ಬಿಟ್ಟ ಜನತೆ : ಈ ಭಾಗದ ಜನತೆ ಕಳೆದ ಹಲವಾರು ದಿನಗಳಿಂದ ಜೀವ ಭಯದಲ್ಲೇ ಕಾಲ ದೂಡುತ್ತಿದ್ದರು.ಕಾಡಿಗೆ ತೆರಳಲು ಹಸು ಕರುಗಳಿಗೆ ಮೇವು ತರಲು ಸಹ ಜನ ಕಷ್ಟ ಪಡುವಂತಹ ಸಮಯ ತುಂಬಾ ಇತ್ತು.. ಚಿರತೆ ಭಯದಲ್ಲಿ ಜನ ತುಂಬಾ ಹೈರಾಣಗಿದ್ದರು.ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸೆರೆಹಿಡಿಯುವಂತೆ ಒತ್ತಾಯಿಸಿದ್ದರು. ಕೊನೆಗೂ ಚಿರತೆ ಸೆರೆ ಸಿಕ್ಕಿ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…