ಹನೂರು : ಹಲವಾರು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ನರಭಕ್ಷಕ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದ್ದಾರೆ .
ತಾಲೂಕಿನ ಕೆ ವಿ ಎನ್ ದೊಡ್ಡಿ, ಕೆಂಚಯ್ಯನದೊಡ್ಡಿ, ಭಾಗದ ಜನರನ್ನು ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಕೆಂಚಯ್ಯನದೊಡ್ಡಿಗ್ರಾಮದ ಅರಣ್ಯ ಪ್ರದೇಶದ ಬಳಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ಸೆರೆ ಸಿಕ್ಕ ಚಿರತೆ : ಹಲವಾರು ಹಸು, ಮೇಕೆಗಳು ಸಾಲದು ಎಂಬಂತೆ ಮನುಷ್ಯನನ್ನು ಸಹ ಕೊಂದು ಈ ಭಾಗದ ಜನರ ನಿದ್ದೆಗೆಡಿಸಿತ್ತು.ಹಲವಾರು ದಿನಗಳಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳಿಗೂ ಸಹ ನಿದ್ದೆಗೆಡಿಸಿತ್ತು. ಇದರಿಂದ ಎಲ್ಲರಿಗೂ ತೊಂದರೆಯಾಗಿತ್ತು. ಕೊನೆಗೂ ಕೆಂಚಯ್ಯನದೊಡ್ಡಿ ಬಳಿ ಸಿಕ್ಕಿ ಬಿದ್ದಿದೆ.
ನಿಟ್ಟುಸಿರು ಬಿಟ್ಟ ಜನತೆ : ಈ ಭಾಗದ ಜನತೆ ಕಳೆದ ಹಲವಾರು ದಿನಗಳಿಂದ ಜೀವ ಭಯದಲ್ಲೇ ಕಾಲ ದೂಡುತ್ತಿದ್ದರು.ಕಾಡಿಗೆ ತೆರಳಲು ಹಸು ಕರುಗಳಿಗೆ ಮೇವು ತರಲು ಸಹ ಜನ ಕಷ್ಟ ಪಡುವಂತಹ ಸಮಯ ತುಂಬಾ ಇತ್ತು.. ಚಿರತೆ ಭಯದಲ್ಲಿ ಜನ ತುಂಬಾ ಹೈರಾಣಗಿದ್ದರು.ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸೆರೆಹಿಡಿಯುವಂತೆ ಒತ್ತಾಯಿಸಿದ್ದರು. ಕೊನೆಗೂ ಚಿರತೆ ಸೆರೆ ಸಿಕ್ಕಿ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…