ಹನೂರು : ಹಲವಾರು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ನರಭಕ್ಷಕ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದ್ದಾರೆ .
ತಾಲೂಕಿನ ಕೆ ವಿ ಎನ್ ದೊಡ್ಡಿ, ಕೆಂಚಯ್ಯನದೊಡ್ಡಿ, ಭಾಗದ ಜನರನ್ನು ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಕೆಂಚಯ್ಯನದೊಡ್ಡಿಗ್ರಾಮದ ಅರಣ್ಯ ಪ್ರದೇಶದ ಬಳಿ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ಸೆರೆ ಸಿಕ್ಕ ಚಿರತೆ : ಹಲವಾರು ಹಸು, ಮೇಕೆಗಳು ಸಾಲದು ಎಂಬಂತೆ ಮನುಷ್ಯನನ್ನು ಸಹ ಕೊಂದು ಈ ಭಾಗದ ಜನರ ನಿದ್ದೆಗೆಡಿಸಿತ್ತು.ಹಲವಾರು ದಿನಗಳಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳಿಗೂ ಸಹ ನಿದ್ದೆಗೆಡಿಸಿತ್ತು. ಇದರಿಂದ ಎಲ್ಲರಿಗೂ ತೊಂದರೆಯಾಗಿತ್ತು. ಕೊನೆಗೂ ಕೆಂಚಯ್ಯನದೊಡ್ಡಿ ಬಳಿ ಸಿಕ್ಕಿ ಬಿದ್ದಿದೆ.
ನಿಟ್ಟುಸಿರು ಬಿಟ್ಟ ಜನತೆ : ಈ ಭಾಗದ ಜನತೆ ಕಳೆದ ಹಲವಾರು ದಿನಗಳಿಂದ ಜೀವ ಭಯದಲ್ಲೇ ಕಾಲ ದೂಡುತ್ತಿದ್ದರು.ಕಾಡಿಗೆ ತೆರಳಲು ಹಸು ಕರುಗಳಿಗೆ ಮೇವು ತರಲು ಸಹ ಜನ ಕಷ್ಟ ಪಡುವಂತಹ ಸಮಯ ತುಂಬಾ ಇತ್ತು.. ಚಿರತೆ ಭಯದಲ್ಲಿ ಜನ ತುಂಬಾ ಹೈರಾಣಗಿದ್ದರು.ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸೆರೆಹಿಡಿಯುವಂತೆ ಒತ್ತಾಯಿಸಿದ್ದರು. ಕೊನೆಗೂ ಚಿರತೆ ಸೆರೆ ಸಿಕ್ಕಿ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…