ತುಮಕೂರು: ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲನಿಯಲ್ಲಿ ಶನಿವಾರ
ಬೆಳಗ್ಗೆ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ನಡೆಸಿದ್ದು ಇಬ್ಬರಿಗೂ ಗಾಯಗಳಾಗಿವೆ.
ಕೊಳ್ಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಕೆಂಪರಾಜು ಆವರ ಮಕ್ಕಳಾದ ಧನುಷ್ (13) ಈ ಹಾಗೂ ಚೇತನ್ ಕೆ (15 ಚಿರತೆ ದಾಳಿಗೆ ಒಳಗಾದವರು.
ಇಬ್ಬರು ಬಾಲಕರು ಕೊಟ್ಟಿಗೆಗೆ ದನದ ಹಾಲು ಕರೆಯಲು ಹೋಗಿದ್ದರು. ಈ ವೇಳೆ ಕೊಟ್ಠಿಗೆಯಲ್ಲೇ ಅವಿತಿದ್ದ
ಚಿರತೆ ದಾಳಿ ಮಾಡಿದೆ. ಇದರಿಂದ ಭಯಗೊಂಡ ಮಕ್ಕಳು ಕಿರುಚಾಡಿದ್ದಾರೆ. ಮಕ್ಕಳ ಅರುಚಾಟಕ್ಕೆ ಬೆದರಿದ ಚಿರತೆ ಓಡಿ ಹೋಗಿದೆ.
ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲು
ಅವರ ತಂದೆ ಕೆಂಪರಾಜು ಅವರು 108 ಆಂಬ್ಯುಲೆನ್ಸ್ ಗೆ ಫೋನ್ ಮಾಡಿದ್ದಾರೆ. ಆದರೆ ಸಿಬ್ಬಂದಿ ನಮ್ಮಲ್ಲಿ ಅಂಬುಲೆನ್ಸ್ ಇಲ್ಲ ತುಮಕೂರಿಗೆ ಕರೆ ಮಾಡಿ ಎಂದು ನಿರ್ಲಕ್ಷ್ಯದ ಉತ್ತರ ನೀಡಿದರು ಎಂಬ ದೂರು ಕೇಳಿ ಬಂದಿದೆ.
ಗಾಯಾಳು ಬಾಲಕರನ್ನ ಖಾಸಗಿ ಕಾರಿನಲ್ಲೇ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕರೆದೊಯ್ಯುವಾಗ
ಕೊರಟಗೆರೆ ಆಸ್ಪತ್ರೆ ಆವರಣದಲ್ಲಿ ಎರಡು ಅಂಬುಲೆನ್ಸ್ ಗಳು ನಿಂತಿದ್ದನ್ನು ಕೆಂಪರಾಜು ಗಮನಿಸಿದ್ದಾರೆ.
ಈ ವೇಳೆ ಅಧಿಕಾರಿಗಳ ವಿರುದ್ದ ಕೆಂಪರಾಜು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಅಧಿಕಾರಿಗಳು ಸಮಜಾಯಿಷಿ ನೀಡಿ ಸಮಾಧಾನಗೊಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…