ತುಮಕೂರು: ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲನಿಯಲ್ಲಿ ಶನಿವಾರ
ಬೆಳಗ್ಗೆ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ನಡೆಸಿದ್ದು ಇಬ್ಬರಿಗೂ ಗಾಯಗಳಾಗಿವೆ.
ಕೊಳ್ಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಕೆಂಪರಾಜು ಆವರ ಮಕ್ಕಳಾದ ಧನುಷ್ (13) ಈ ಹಾಗೂ ಚೇತನ್ ಕೆ (15 ಚಿರತೆ ದಾಳಿಗೆ ಒಳಗಾದವರು.
ಇಬ್ಬರು ಬಾಲಕರು ಕೊಟ್ಟಿಗೆಗೆ ದನದ ಹಾಲು ಕರೆಯಲು ಹೋಗಿದ್ದರು. ಈ ವೇಳೆ ಕೊಟ್ಠಿಗೆಯಲ್ಲೇ ಅವಿತಿದ್ದ
ಚಿರತೆ ದಾಳಿ ಮಾಡಿದೆ. ಇದರಿಂದ ಭಯಗೊಂಡ ಮಕ್ಕಳು ಕಿರುಚಾಡಿದ್ದಾರೆ. ಮಕ್ಕಳ ಅರುಚಾಟಕ್ಕೆ ಬೆದರಿದ ಚಿರತೆ ಓಡಿ ಹೋಗಿದೆ.
ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲು
ಅವರ ತಂದೆ ಕೆಂಪರಾಜು ಅವರು 108 ಆಂಬ್ಯುಲೆನ್ಸ್ ಗೆ ಫೋನ್ ಮಾಡಿದ್ದಾರೆ. ಆದರೆ ಸಿಬ್ಬಂದಿ ನಮ್ಮಲ್ಲಿ ಅಂಬುಲೆನ್ಸ್ ಇಲ್ಲ ತುಮಕೂರಿಗೆ ಕರೆ ಮಾಡಿ ಎಂದು ನಿರ್ಲಕ್ಷ್ಯದ ಉತ್ತರ ನೀಡಿದರು ಎಂಬ ದೂರು ಕೇಳಿ ಬಂದಿದೆ.
ಗಾಯಾಳು ಬಾಲಕರನ್ನ ಖಾಸಗಿ ಕಾರಿನಲ್ಲೇ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕರೆದೊಯ್ಯುವಾಗ
ಕೊರಟಗೆರೆ ಆಸ್ಪತ್ರೆ ಆವರಣದಲ್ಲಿ ಎರಡು ಅಂಬುಲೆನ್ಸ್ ಗಳು ನಿಂತಿದ್ದನ್ನು ಕೆಂಪರಾಜು ಗಮನಿಸಿದ್ದಾರೆ.
ಈ ವೇಳೆ ಅಧಿಕಾರಿಗಳ ವಿರುದ್ದ ಕೆಂಪರಾಜು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಅಧಿಕಾರಿಗಳು ಸಮಜಾಯಿಷಿ ನೀಡಿ ಸಮಾಧಾನಗೊಳಿಸಿದರು.
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…
ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…