ತುಮಕೂರು: ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲನಿಯಲ್ಲಿ ಶನಿವಾರ
ಬೆಳಗ್ಗೆ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ನಡೆಸಿದ್ದು ಇಬ್ಬರಿಗೂ ಗಾಯಗಳಾಗಿವೆ.
ಕೊಳ್ಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಕೆಂಪರಾಜು ಆವರ ಮಕ್ಕಳಾದ ಧನುಷ್ (13) ಈ ಹಾಗೂ ಚೇತನ್ ಕೆ (15 ಚಿರತೆ ದಾಳಿಗೆ ಒಳಗಾದವರು.
ಇಬ್ಬರು ಬಾಲಕರು ಕೊಟ್ಟಿಗೆಗೆ ದನದ ಹಾಲು ಕರೆಯಲು ಹೋಗಿದ್ದರು. ಈ ವೇಳೆ ಕೊಟ್ಠಿಗೆಯಲ್ಲೇ ಅವಿತಿದ್ದ
ಚಿರತೆ ದಾಳಿ ಮಾಡಿದೆ. ಇದರಿಂದ ಭಯಗೊಂಡ ಮಕ್ಕಳು ಕಿರುಚಾಡಿದ್ದಾರೆ. ಮಕ್ಕಳ ಅರುಚಾಟಕ್ಕೆ ಬೆದರಿದ ಚಿರತೆ ಓಡಿ ಹೋಗಿದೆ.
ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲು
ಅವರ ತಂದೆ ಕೆಂಪರಾಜು ಅವರು 108 ಆಂಬ್ಯುಲೆನ್ಸ್ ಗೆ ಫೋನ್ ಮಾಡಿದ್ದಾರೆ. ಆದರೆ ಸಿಬ್ಬಂದಿ ನಮ್ಮಲ್ಲಿ ಅಂಬುಲೆನ್ಸ್ ಇಲ್ಲ ತುಮಕೂರಿಗೆ ಕರೆ ಮಾಡಿ ಎಂದು ನಿರ್ಲಕ್ಷ್ಯದ ಉತ್ತರ ನೀಡಿದರು ಎಂಬ ದೂರು ಕೇಳಿ ಬಂದಿದೆ.
ಗಾಯಾಳು ಬಾಲಕರನ್ನ ಖಾಸಗಿ ಕಾರಿನಲ್ಲೇ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕರೆದೊಯ್ಯುವಾಗ
ಕೊರಟಗೆರೆ ಆಸ್ಪತ್ರೆ ಆವರಣದಲ್ಲಿ ಎರಡು ಅಂಬುಲೆನ್ಸ್ ಗಳು ನಿಂತಿದ್ದನ್ನು ಕೆಂಪರಾಜು ಗಮನಿಸಿದ್ದಾರೆ.
ಈ ವೇಳೆ ಅಧಿಕಾರಿಗಳ ವಿರುದ್ದ ಕೆಂಪರಾಜು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಅಧಿಕಾರಿಗಳು ಸಮಜಾಯಿಷಿ ನೀಡಿ ಸಮಾಧಾನಗೊಳಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…