ಜಿಲ್ಲೆಗಳು

ಕೊರಟಗೆರೆ : ಚಿರತೆ ದಾಳಿಯಿಂದ ಬಾಲಕರಿಗೆ ಗಾಯ: ಆಂಬ್ಯುಲೆನ್ಸ್ ನೀಡದ ಅಧಿಕಾರಿಗಳ ವಿರುದ್ಧ ಆಕ್ರೋಶ

ತುಮಕೂರು: ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲನಿಯಲ್ಲಿ ಶನಿವಾರ

ಬೆಳಗ್ಗೆ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ನಡೆಸಿದ್ದು ಇಬ್ಬರಿಗೂ ಗಾಯಗಳಾಗಿವೆ.

ಕೊಳ್ಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಕೆಂಪರಾಜು ಆವರ ಮಕ್ಕಳಾದ ಧನುಷ್ (13) ಈ ಹಾಗೂ ಚೇತನ್ ಕೆ (15 ಚಿರತೆ ದಾಳಿಗೆ ಒಳಗಾದವರು.

ಇಬ್ಬರು ಬಾಲಕರು ಕೊಟ್ಟಿಗೆಗೆ ದನದ ಹಾಲು ಕರೆಯಲು ಹೋಗಿದ್ದರು. ಈ ವೇಳೆ ಕೊಟ್ಠಿಗೆಯಲ್ಲೇ ಅವಿತಿದ್ದ
ಚಿರತೆ ದಾಳಿ ಮಾಡಿದೆ. ಇದರಿಂದ ಭಯಗೊಂಡ ಮಕ್ಕಳು ಕಿರುಚಾಡಿದ್ದಾರೆ. ಮಕ್ಕಳ ಅರುಚಾಟಕ್ಕೆ ಬೆದರಿದ ಚಿರತೆ ಓಡಿ ಹೋಗಿದೆ.
ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲು
ಅವರ ತಂದೆ ಕೆಂಪರಾಜು ಅವರು 108 ಆಂಬ್ಯುಲೆನ್ಸ್ ಗೆ ಫೋನ್ ಮಾಡಿದ್ದಾರೆ. ಆದರೆ ಸಿಬ್ಬಂದಿ ನಮ್ಮಲ್ಲಿ ಅಂಬುಲೆನ್ಸ್ ಇಲ್ಲ ತುಮಕೂರಿಗೆ ಕರೆ ಮಾಡಿ ಎಂದು ನಿರ್ಲಕ್ಷ್ಯದ ಉತ್ತರ ನೀಡಿದರು ಎಂಬ ದೂರು ಕೇಳಿ ಬಂದಿದೆ.
ಗಾಯಾಳು ಬಾಲಕರನ್ನ ಖಾಸಗಿ ಕಾರಿನಲ್ಲೇ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕರೆದೊಯ್ಯುವಾಗ
ಕೊರಟಗೆರೆ ಆಸ್ಪತ್ರೆ ಆವರಣದಲ್ಲಿ ಎರಡು ಅಂಬುಲೆನ್ಸ್ ಗಳು ನಿಂತಿದ್ದನ್ನು ಕೆಂಪರಾಜು ಗಮನಿಸಿದ್ದಾರೆ.
ಈ ವೇಳೆ ಅಧಿಕಾರಿಗಳ ವಿರುದ್ದ ಕೆಂಪರಾಜು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಅಧಿಕಾರಿಗಳು ಸಮಜಾಯಿಷಿ ನೀಡಿ ಸಮಾಧಾನಗೊಳಿಸಿದರು.

andolanait

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

2 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

3 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

3 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

4 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

4 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

4 hours ago