ಹನೂರು: ಚಿರತೆ ದಾಳಿಗೆ ಹಸು ಒಂದು ಬಲಿಯಾಗಿರುವ ಘಟನೆ ಕಾವೇರಿ ವನ್ಯಜೀವಿ ಅರಣ್ಯ ವಲಯ ವ್ಯಾಪ್ತಿಯ ಚಿಕ್ಕಿಂದುವಾಡಿ ಗ್ರಾಮದ ಸಮೀಪ ಕಂಡು ಬಂದಿದ್ದು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ .
ಚಿಕ್ಕಿಂದವಾಡಿ ಗ್ರಾಮದ ಕರಿಯನಪುರ ಗ್ರಾಮದ ರಾಚಯ್ಯ ಎಂಬ ವ್ಯಕ್ತಿ ಹಸುಗಳನ್ನು ಮೇಯಿಸುತ್ತಿದ್ದಾಗ ಕಾಣೆಯಾಗಿದ್ದ ಹಸುವೊಂದನ್ನು ಹುಡುಕಿಕೊಂಡು ಹೋದಾಗ ಚಿರತೆಯು ಬೇಟೆಯಾಡಿ ತಿನ್ನುತ್ತಿರುವ ದೃಶ್ಯವನ್ನು ಕಣ್ಣಾರೆ ಕಂಡು ಭಯಭೀತನಾಗಿ ಓಡಿ ಬಂದು ಗ್ರಾಮಸ್ಥರ ಬಳಿ ವಿಷಯ ತಿಳಿಸಿದ್ದಾನೆ. ತಕ್ಷಣ ಜನರ ಗುಂಪು ಹೋಗಿ ಚಿರತೆಯನ್ನು ಓಡಿಸಿರುವ ಘಟನೆ ನಡೆದಿದೆ.
ಈ ಘಟನೆಯಿಂದ ಪಶುಪಾಲಕರಾಗಿರುವ ಗ್ರಾಮಸ್ಥರು ಭಯಬೀತರಾಗಿದ್ದು, ಬೇಟೆಯ ರುಚಿಕಂಡಿರುವ ಚಿರತೆಯು ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗಿ ಹಸು ಕುರಿಗಳನ್ನು ಬೇಟೆಯಾಡಬಹುದು. ಆದ್ದರಿಂದ
ಅರಣ್ಯ ಇಲಾಖೆಯವರು ಸೂಕ್ತ ಸ್ಥಳದಲ್ಲಿ ಬೋನು ಇಟ್ಟು ಚಿರತೆಯನ್ನು ಬಂಧಿಸಬೇಕು, ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…